Advertisement

SSLC ಪರೀಕ್ಷೆ ರದ್ದು ಕೋರಿ ಸಲ್ಲಿಸಿದ ಮೇಲ್ಮನವಿಯನ್ನು ವಜಾಗೊಳಿಸಿದ ಸುಪ್ರೀಂ

02:42 PM Jun 17, 2020 | sudhir |

ಬೆಂಗಳೂರು : ಕರ್ನಾಟಕದಲ್ಲಿ ಜೂನ್ 25ರಂದು ನಡೆಯಬೇಕಿದ್ದ ಎಸ್ಎಸ್ಎಲ್ ಸಿ ಪರೀಕ್ಷೆ ರದ್ದುಪಡಿಸುವಂತೆ ಕೋರಿ ಸಲ್ಲಿಸಲಾಗಿದ್ದ ವಿಶೇಷ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ವಜಾಗೊಳಿಸಿದೆ.

Advertisement

ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದ ಸಮಸ್ಯೆಗಳು ಎದುರಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ತೊಂದರೆಯಾಗಬಹುದು ಅಲ್ಲದೆ ವಿದ್ಯಾರ್ಥಿಗಳ ಪೋಷಕರು ಆತಂಕದಲ್ಲಿ ಇದ್ದಾರೆ, ಇಂತಹ ಸಂದಿಗ್ದ ಪರಿಸ್ಥಿತಿಯಲ್ಲಿ ಪರೀಕ್ಷೆ ನಡೆಸದಿರುವುದು ಉತ್ತಮ ಹಾಗಾಗಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಪರೀಕ್ಷೆ ರದ್ದುಪಡಿಸಬೇಕೆಂದು ಬೆಳಗಾವಿಯ ಮಹಿಳೆಯೊಬ್ಬರು ಸುಪ್ರೀಂ ಕೋರ್ಟಿಗೆ ಮೇಲ್ಮನವಿಯನ್ನು ಸಲ್ಲಿಸಿದ್ದರು, ಅರ್ಜಿಯನ್ನು ಆಲಿಸಿದ ಸುಪ್ರೀಂ ನ ತ್ರಿ ಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿದೆ.

ಇದರೊಂದಿಗೆ ರಾಜ್ಯದ ವಿದ್ಯಾರ್ಥಿಗಳ ಪರೀಕ್ಷೆಗೆ ಎದುರಾದ ತೊಡಕು ನಿವಾರಣೆಯಾದಂತಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next