Advertisement

ಎಸ್ಸೆಸ್ಸೆಲ್ಸಿ ಪರೀಕ್ಷೆ: ಆತ್ಮವಿಶ್ವಾಸ ಮೂಡಿಸಿ

06:30 AM Jun 23, 2020 | Lakshmi GovindaRaj |

ಹಾಸನ: ಕೋವಿಡ್‌ 19 ವ್ಯಾಪಕವಾಗಿ ಹರಡುತ್ತಿರುವುದರಿಂದ ಎಸ್ಸೆಸ್ಸೆಲ್ಸಿ ಪರೀಕ್ಷಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಗಳಲ್ಲಿ ಪೂರಕ ವಾತಾವರಣ ಸೃಷ್ಟಿಸಬೇಕೆಂದು ಜಿಲ್ಲಾಧಿಕಾರಿಗಳಿಗೆ ಪ್ರಾಥಮಿಕ  ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ ಸೂಚಿಸಿದರು.

Advertisement

ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಪೂರ್ವ ಸಿದ್ಧತೆ ಕುರಿತು ವಿಡಿಯೋ ಸಂವಾದ ನಡೆಸಿದ ಅವರು ಜೂ. 25ರಿಂದ ಜು.4ರವರೆಗೆ ಪರೀಕ್ಷೆ ನಡೆಯಲಿದ್ದು,  ಪರೀಕ್ಷಾ ಕೇಂದ್ರಗಳಲ್ಲಿ ನೂಕುನುಗ್ಗಲು ಉಂಟಾಗದಂತೆ ಹಾಗೂ ಪರೀಕ್ಷೆಗೆ ಮುನ್ನ ಮತ್ತು ನಂತರ ವಿದ್ಯಾರ್ಥಿಗಳು ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ಬರೆಯುವಂತೆ ಕಟ್ಟನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದರು.

ಜೂ.24ರಂದು ಪರೀಕ್ಷಾ ಕೇಂದ್ರಗಳಲ್ಲಿ ಕೂರುವ ಕೊಠಡಿ ಹಾಗೂ ಸ್ಥಳಗಳನ್ನು ವೀಕ್ಷಿಸಲು ವಿದ್ಯಾರ್ಥಿಗಳು ಬರುತ್ತಾರೆ. ಹಾಗಾಗಿ ಅಂದು ಹಾಗೂ ಉಳಿದೆಲ್ಲಾ ದಿನ ದಂದು ಎಲ್ಲಾ ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಜೇಷನ್‌ ಮಾಡಬೇಕು  ಎಂದು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು. ಪರೀಕ್ಷೆ ದಿನದಂದು ವಿದ್ಯಾರ್ಥಿಗಳನ್ನು ತಪಾಸಣೆ ಮಾಡುವುದರಿಂದ ವಿದ್ಯಾರ್ಥಿಗಳು ಬೆಳಗ್ಗೆ 7.30ಕ್ಕೆ ಪರೀಕ್ಷಾ ಕೇಂದ್ರಕ್ಕೆ ಬರಲಿದ್ದು, ಪರೀಕ್ಷಾ ಕೇಂದ್ರದ ಸಿಬ್ಬಂದಿ  ಹಾಗೂ ಪೊಲೀಸ್‌ ಇಲಾಖೆಯ ಸಿಬ್ಬಂದಿ ಅದಕ್ಕೆ ಮುನ್ನವೇ ಹಾಜರಿರುವಂತೆ ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿ ಎಂದು ಎಲ್ಲ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಸಚಿವರು ತಾಕೀತು ಮಾಡಿದರು.

ಕಂಟೈನ್ಮೆಂಟ್‌ ಪರೀಕ್ಷಾರ್ಥಿಗಳ ಮಾಹಿತಿ ನೀಡಿ: ಆರೋಗ್ಯ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಒಂದುಗೂಡಿ ಕಂಟೈನ್ಮೆಂಟ್‌ ವಲಯ ಗಳಲ್ಲಿ ಪರೀಕ್ಷೆ ಬರೆಯುವವರು ಎಷ್ಟು ಮಕ್ಕಳಿ ದ್ದಾರೆ ಎಂಬುದರ ಬಗ್ಗೆ ಮಾಹಿತಿ ನೀಡಬೇಕು.

ಅಂತಹ  ವಿದ್ಯಾರ್ಥಿಗಳನ್ನು ಪ್ರತ್ಯೇಕ ಕೊಠಡಿ ಯಲ್ಲಿ ಕೂರಿಸಿ ಪರೀಕ್ಷೆ ನಡೆಸಿ ಮತ್ತು ಎಲ್ಲರಿಗೂ ಎನ್‌-95 ಮಾಸ್ಕ್ ಕಡ್ಡಾಯವಾಗಿ ನೀಡಬೇಕು ಎಂದು ನಿರ್ದೇಶಿಸಿದ ಸಚಿವರು, ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಕ್ವಾರಂಟೈನ್‌  ಕೇಂದ್ರಗಳಲ್ಲಿದ್ದರೆ ಅಥವಾ ಸೋಂಕಿತ ರಾಗಿದ್ದರೆ ಅಂತಹ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯ ದಿನದಂದು ಬರೆಸಿ ಪ್ರಥಮ ಪ್ರಯತ್ನವೆಂದು ಪರಿಗಣಿಸಲಾಗುತ್ತದೆ ಎಂದರು.

Advertisement

ಸರ್ಕಾರದಿಂದ ವಿದ್ಯಾರ್ಥಿಗಳಿಗೆ ನೀಡಿರುವ ಮಾಸ್ಕ್ಗಳನ್ನು  ಹೊರತುಪಡಿಸಿ ಯಾರಾದರೂ ದಾನಿಗಳು, ಸಂಘ ಸಂಸ್ಥೆಗಳು ಮಾಸ್ಕ್ ನೀಡಲು ಬಂದರೆ ಅಂತಹವರನ್ನು ಪರೀಕ್ಷಾ ಕೇಂದ್ರದ ಬಳಿ ಸೇರಿಸದಂತೆ ಪೊಲೀಸ್‌ ಸಿಬ್ಬಂದಿ ಎಚ್ಚರ ವಹಿಸಬೇಕು. ಮಾಸ್ಕ್ ಮರೆತು ಬಂದ ವಿದ್ಯಾರ್ಥಿಗಳಿಗೆ  ಮತ್ತೂಂದು ಮಾಸ್ಕ್ ನೀಡಬೇಕು. ವಿದ್ಯಾರ್ಥಿ ಗಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಜಗದೀಶ್‌ ಮಾತನಾಡಿ, ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಿ ಹಾಗೂ  ಮಲೆನಾಡು ಮತ್ತು ಕರಾವಳಿ ಪ್ರದೇಶಗಳಿಗೆ ವಿಶೇಷ ಗಮನಹರಿಸಿ ಮಕ್ಕಳು ಸರಿಯಾದ ಸಮಯಕ್ಕೆ ಪರೀಕ್ಷಾ ಕೇಂದ್ರಕ್ಕೆ ಹಾಜರಾಗುವಂತೆ ವ್ಯವಸ್ಥೆ ಮಾಡಬೇಕು ಎಂದರು. ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ ಅವರು ಹಾಸನ  ಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ  ಮಾಡಿಕೊಂಡಿರುವ ಪೂರ್ವ ಸಿದ್ಧತೆ ಕುರಿತು ಸಚಿವರಿಗೆ ಮಾಹಿತಿ ನೀಡಿದರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶ್ರೀನಿವಾಸ ಗೌಡ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಚಂದ್ರಶೇಖರ್‌, ಡಿಡಿಪಿಐ  ಪ್ರಕಾಶ್‌ ಹಾಗೂ ಎಲ್ಲ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next