Advertisement
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಮೊದಲು ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿ ಆಕ್ಷೇಪಣೆಗಳಿಗೆ ಆಹ್ವಾನಿಸಲಾಗಿತ್ತು. ಇದೀಗ ಜೂ.21ರಿಂದ ಅಧಿಕೃತವಾಗಿ ಪರೀಕ್ಷೆ ಆರಂಭಗೊಳ್ಳಲಿವೆ. ಪ್ರತಿಯೊಂದು ವಿಷಯದ ಪರೀಕ್ಷೆ ಮುಗಿದ ನಂತರ ಸೂಕ್ತ ಅಂತರವಿಟ್ಟು ಪರೀಕ್ಷೆ ನಡೆಸಲಾಗುತ್ತಿದೆ ಎಂದು ಹೇಳಿದರು.
Related Articles
Advertisement
ಮಕ್ಕಳ ಮಾನಸಿಕ ಒತ್ತಡವನ್ನು ಹೆಚ್ಚಿಸದಂತೆ ಮತ್ತು ಆತಂಕಗೊಳ್ಳದಂತೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವ ಹೊಣೆ ಸರ್ಕಾರ ಮತ್ತು ಅಧಿಕಾರಿಗಳ ಮೇಲಿದೆ. ಜೊತೆಗೆ ಕೋವಿಡ್-19 ನಿಂದಾಗಿ ಕಲಿಕೆಯಲ್ಲಿ ಉಳಿಕೆಯಾಯಿತು ಎನ್ನುವ ಭಾವ ಮಕ್ಕಳಲ್ಲಿ ಬರದಂತೆ ಅವರಿಗೆ ವಿಷಯವನ್ನು ಬೋಧಿಸಲಾಗುವುದು ಎಂದು ಸಚಿವ ಸುರೇಶಕುಮಾರ್ ಹೇಳಿದರು.
ಕಳೆದ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡದೇ ಇರುವ ಜಿಲ್ಲೆಗಳಿಗೆ ಒತ್ತು ಕೊಟ್ಟು ಈ ಬಾರಿ ಸುಧಾರಿಸಲು ಎಲ್ಲಾ ಶಾಲಾ ಮುಖ್ಯೋಪಾಧ್ಯಯರಿಗೆ ತರಬೇತಿ ನೀಡಲಾಗುವುದು. ಅಷ್ಟೇಯಲ್ಲ ಉತ್ತಮ ಫಲಿತಾಂಶ ದಾಖಲಿಸಿರುವ ಜಿಲ್ಲೆಗಳಲ್ಲಿನ ಉತ್ತಮ ಅಂಶಗಳನ್ನು ಹೆಕ್ಕಿ ತೆಗೆದು ಅದನ್ನು ಇತರ ಜಿಲ್ಲೆಗಳಿಗೂ ವಿಸ್ತರಿಸಲಾಗುವುದು. ಇನ್ನು ಅಧಿಕಾರಿಗಳೇ ನೇರವಾಗಿ ಕೆಲವಷ್ಟು ಶಾಲೆಗಳನ್ನು ದತ್ತು ತೆಗೆದುಕೊಂಡು ಅಭಿವೃದ್ಧಿ ಪಡೆಸಬೇಕು. ಈ ಸಂಬಂಧ ನಾನು ಏಪ್ರಿಲ್ 2 ರಿಂದ ರಾಜ್ಯಾಧ್ಯಂತ ಪ್ರವಾಸ ಆರಂಭಿಸುತ್ತೇನೆ ಎಂದು ಸಚಿವ ಸುರೇಶಕುಮಾರ್ ಹೇಳಿದರು.
ಮಾ.1 ರಿಂದ ಆರಂಭಗೊಳ್ಳಬೇಕಿದ್ದ ಕಿರಿಯ ಪ್ರಾಥಮಿಕ ಶಾಲೆಗಳನ್ನು ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇನ್ನು ಒಂದು ವಾರ ಕಾದು ನೋಡಿ ಆರಂಭಿಸಲಾಗುವುದು. ಕೇಂದ್ರದ ಒಪ್ಪಿಗೆ ಸಿಕ್ಕ ನಂತರ ಮಧ್ಯಾಹ್ನದ ಬಿಸಿಯೂಟ ಆರಂಭಿಸಲಾಗುವುದು.
-ಸುರೇಶಕುಮಾರ್,ಪ್ರಾಥಮಿಕ ಶಿಕ್ಷಣ ಸಚಿವ