Advertisement

ಜೂ.21 ರಿಂದ ಜು.5 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ : ಸಚಿವ ಸುರೇಶಕುಮಾರ್

07:00 PM Mar 01, 2021 | Team Udayavani |

ಧಾರವಾಡ : 2020-21 ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಸ್‌ಎಲ್ ಪರೀಕ್ಷೆ ಜೂ.21 ರಿಂದ ಜು.5 ವರೆಗೂ ನಡೆಸಲು ಸರ್ಕಾರ ತೀರ್ಮಾನಿಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶಕುಮಾರ್ ಹೇಳಿದರು.

Advertisement

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಮೊದಲು ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿ ಆಕ್ಷೇಪಣೆಗಳಿಗೆ ಆಹ್ವಾನಿಸಲಾಗಿತ್ತು. ಇದೀಗ ಜೂ.21ರಿಂದ ಅಧಿಕೃತವಾಗಿ ಪರೀಕ್ಷೆ ಆರಂಭಗೊಳ್ಳಲಿವೆ. ಪ್ರತಿಯೊಂದು ವಿಷಯದ ಪರೀಕ್ಷೆ ಮುಗಿದ ನಂತರ ಸೂಕ್ತ ಅಂತರವಿಟ್ಟು ಪರೀಕ್ಷೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಜೂನ್ 21- ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ,

ಜೂ. 24 -ಗಣಿತ, ಜೂ. 28 -ವಿಜ್ಞಾನ, ಜೂ. 30-ತೃತೀಯ ಭಾಷೆಗಳಾದ ಹಿಂದಿ, ಕನ್ನಡ, ಇಂಗ್ಲಿಷ್, ಅರೆಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಜು. 2 – ದ್ವಿತೀಯ ಭಾಷೆ ಇಂಗ್ಲಿಷ್/ ಕನ್ನಡ, ಜು.5 – ಸಮಾಜ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ ಎಂದರು.

ಇದನ್ನೂ ಓದಿ:ಆಧುನಿಕ ಶೈಲಿಯ ಆಹಾರ ಪದಾರ್ಥ; ಸ್ಥೂಲಕಾಯ ನಿವಾರಣೆಗೆ ಸರಳ ಮನೆಮದ್ದು

Advertisement

ಮಕ್ಕಳ ಮಾನಸಿಕ ಒತ್ತಡವನ್ನು ಹೆಚ್ಚಿಸದಂತೆ ಮತ್ತು ಆತಂಕಗೊಳ್ಳದಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವ ಹೊಣೆ ಸರ್ಕಾರ ಮತ್ತು ಅಧಿಕಾರಿಗಳ ಮೇಲಿದೆ. ಜೊತೆಗೆ ಕೋವಿಡ್-19 ನಿಂದಾಗಿ ಕಲಿಕೆಯಲ್ಲಿ ಉಳಿಕೆಯಾಯಿತು ಎನ್ನುವ ಭಾವ ಮಕ್ಕಳಲ್ಲಿ ಬರದಂತೆ ಅವರಿಗೆ ವಿಷಯವನ್ನು ಬೋಧಿಸಲಾಗುವುದು ಎಂದು ಸಚಿವ ಸುರೇಶಕುಮಾರ್ ಹೇಳಿದರು.

ಕಳೆದ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡದೇ ಇರುವ ಜಿಲ್ಲೆಗಳಿಗೆ ಒತ್ತು ಕೊಟ್ಟು ಈ ಬಾರಿ ಸುಧಾರಿಸಲು ಎಲ್ಲಾ ಶಾಲಾ ಮುಖ್ಯೋಪಾಧ್ಯಯರಿಗೆ ತರಬೇತಿ ನೀಡಲಾಗುವುದು. ಅಷ್ಟೇಯಲ್ಲ ಉತ್ತಮ ಫಲಿತಾಂಶ ದಾಖಲಿಸಿರುವ ಜಿಲ್ಲೆಗಳಲ್ಲಿನ ಉತ್ತಮ ಅಂಶಗಳನ್ನು ಹೆಕ್ಕಿ ತೆಗೆದು ಅದನ್ನು ಇತರ ಜಿಲ್ಲೆಗಳಿಗೂ ವಿಸ್ತರಿಸಲಾಗುವುದು. ಇನ್ನು ಅಧಿಕಾರಿಗಳೇ ನೇರವಾಗಿ ಕೆಲವಷ್ಟು ಶಾಲೆಗಳನ್ನು ದತ್ತು ತೆಗೆದುಕೊಂಡು ಅಭಿವೃದ್ಧಿ ಪಡೆಸಬೇಕು. ಈ ಸಂಬಂಧ ನಾನು ಏಪ್ರಿಲ್ 2 ರಿಂದ ರಾಜ್ಯಾಧ್ಯಂತ ಪ್ರವಾಸ ಆರಂಭಿಸುತ್ತೇನೆ ಎಂದು ಸಚಿವ ಸುರೇಶಕುಮಾರ್ ಹೇಳಿದರು.

ಮಾ.1 ರಿಂದ ಆರಂಭಗೊಳ್ಳಬೇಕಿದ್ದ ಕಿರಿಯ ಪ್ರಾಥಮಿಕ ಶಾಲೆಗಳನ್ನು ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇನ್ನು ಒಂದು ವಾರ ಕಾದು ನೋಡಿ ಆರಂಭಿಸಲಾಗುವುದು. ಕೇಂದ್ರದ ಒಪ್ಪಿಗೆ ಸಿಕ್ಕ ನಂತರ ಮಧ್ಯಾಹ್ನದ ಬಿಸಿಯೂಟ ಆರಂಭಿಸಲಾಗುವುದು.

-ಸುರೇಶಕುಮಾರ್,ಪ್ರಾಥಮಿಕ ಶಿಕ್ಷಣ ಸಚಿವ

Advertisement

Udayavani is now on Telegram. Click here to join our channel and stay updated with the latest news.

Next