Advertisement

ಎಸ್‍ಎಸ್‍ಎಲ್‍ಸಿ ಪರೀಕ್ಷೆ: ಗ್ರಾಮೀಣ ಮಕ್ಕಳಿಗೆ ಬಸ್ ವ್ಯವಸ್ಥೆ ಮಾಡಿದ ಗ್ರಾಪಂ ಅಧ್ಯಕ್ಷ

11:35 AM Mar 29, 2022 | Team Udayavani |

ವಾಡಿ: ನಗರಕ್ಕೆ ಹೋಗಿ ಪರೀಕ್ಷೆ ಬರೆಯಲು ಸಾರಿಗೆ ವ್ಯವಸ್ಥೆಯ ಸಂಕಷ್ಟ ಎದುರಿಸಿ ಚಿಂತಿತರಾಗಿದ್ದ ಗ್ರಾಮೀಣ ಭಾಗದ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಗ್ರಾಪಂ ಅಧ್ಯಕ್ಷನೋರ್ವ ಬಸ್ ವ್ಯವಸ್ಥೆ ಮಾಡುವ ಮೂಲಕ ಶಿಕ್ಷಣ ಕಾಳಜಿ ಮೆರೆದ ಘಟನೆ ಚಿತ್ತಾಪುರ ತಾಲೂಕಿನ ಯಾಗಾಪುರ ಗ್ರಾಮದಲ್ಲಿ ನಡೆದಿದೆ.

Advertisement

ಸೋಮವಾರದಿಂದ ಶುರುವಾದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಲು ಯಾಗಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳು ಮತ್ತು ತಾಂಡಾಗಳ ಒಟ್ಟು 68  ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳು  18 ಕಿ.ಮೀ ದೂರದ ಹೋಬಳಿ ಕೇಂದ್ರಸ್ಥಾನ ನಾಲವಾರ ಪರೀಕ್ಷಾ ಕೇಂದ್ರಕ್ಕೆ ಹೋಗಬೇಕಿತ್ತು. ಯಾಗಾಪುರದಿಂದ ನಾಲವಾರಕ್ಕೆ ಸಾರಿಗೆ ಸೌಲಭ್ಯವಿಲ್ಲ. ಹಣ ಖರ್ಚು ಮಾಡಿ ಖಾಸಗಿ ವಾಹನಗಳ ವ್ಯವಸ್ಥೆ ಮಾಡಿಕೊಳ್ಳಬೇಕಾದ ಪ್ರಸಂಗ ಎದುರಾಗಿತ್ತು. ಇದನ್ನು ಗಮನಿಸಿದ ಯಾಗಾಪುರ ಗ್ರಾಪಂ ಅಧ್ಯಕ್ಷ ಮದನ್ ರಾಠೋಡ, ತಕ್ಷಣವೇ ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಗೆ ಪತ್ರ ಬರೆದು ಪರೀಕ್ಷೆ ಮುಗಿಯುವ ವರೆಗೆ ತಾತ್ಕಾಲಿಕ ವಿಶೇಷ ಬಸ್ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದರು.

ಗ್ರಾಮೀಣ ಮಕ್ಕಳ ಶೈಕ್ಷಣಿಕ ಭವಿಷ್ಯದ ಹಿತದೃಷ್ಟಿಯಿಂದ ಸಾರಿಗೆ ಸಂಸ್ಥೆ ಅಧಿಕಾರಿಗಳು ಸೋಮವಾರ ಬೆಳಗ್ಗೆಯೇ ಯಾಗಾಪುರ ಗ್ರಾಮಕ್ಕೆ ಬಸ್ ಕಳುಹಿಸಿ ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಗೆ ಉಚಿತವಾಗಿ ಪೆನ್ ವಿತರಿಸುವ ಮೂಲಕ ಗ್ರಾಪಂ ಅಧ್ಯಕ್ಷ ಮದನ್ ರಾಠೋಡ ಬಸ್ ಸಂಚಾರಕ್ಕೆ ಚಾಲನೆ ನೀಡಿ ಮಕ್ಕಳಿಗೆ ಶುಭಕೋರಿದ್ದಾರೆ.

ಮುಖಂಡರಾದ ವಿಜಯ್ ಕುಮಾರ್ ನಾಯಕ್, ರೆಡ್ಡಿ ಬಂಜಾರ, ಚಂದ್ರು ಗೌಡ, ಗುಳ್ಳಪ್ಪ ಮುಂತಾದವರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next