Advertisement

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನಕಲು ಮಾಡುತಿದ್ದ 6 ವಿದ್ಯಾರ್ಥಿಗಳು ಡಿಬಾರ್

06:35 PM Jun 27, 2020 | sudhir |

ಗದಗ: ಜಿಲ್ಲೆಯಲ್ಲಿ ಶನಿವಾರ ನಡೆದ ಎಸ್‌ಎಸ್‌ಎಲ್‌ಸಿ ಗಣಿತ ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದ 6 ವಿದ್ಯಾರ್ಥಿಗಳನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಧಾರವಾಡ ಅಪರ ಆಯುಕ್ತ ಮೇಜರ್ ಸಿದ್ಧಲಿಂಗಯ್ಯ ಎಸ್. ಹಿರೇಮಠ ಡಿಬಾರ್ ಮಾಡಿದ್ದಾರೆ.

Advertisement

ನಗರದ ಮುನ್ಸಿಪಲ್ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಮೂವರು ಹಾಗೂ ಬಾಸೆಲ್ ಮಿಷನ್ ಪ್ರೌಢ ಶಾಲಾ ಪರೀಕ್ಷಾ ಕೇಂದ್ರದಲ್ಲಿ ಮೂವರು ಸೇರಿದಂತೆ ಆರು ಜನರು ನಕಲು ಮಾಡುತ್ತಿದ್ದ ವೇಲೆ ಅಪರ ಆಯುಕ್ತರಿಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಧಾರವಾಡ ಅಪರ ಆಯುಕ್ತರು ಅನಿರೀಕ್ಷಿತವಾಗಿ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಪರೀಕ್ಷಾರ್ಥಿಗಳು ನಕಲು ಮಾಡುತ್ತಿರುವುದು ಕಂಡು ಬಂದಿದೆ. ತಕ್ಷಣ ಅವರನ್ನು ಡಿಬಾರ್ ಮಾಡಲಾಗಿದೆ. ಈ ವಿದ್ಯಾರ್ಥಿಗಳು ಖಾಸಗಿಯಾಗಿ ಪರೀಕ್ಷೆ ಕಟ್ಟಿದ್ದರು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next