Advertisement

ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳಲ್ಲಿ ಎಸ್ಎಸ್ಎಲ್ ಸಿ ಮೌಲ್ಯಮಾಪನ ಮುಂದೂಡಿಕೆ

04:51 PM Jul 12, 2020 | keerthan |

ಬೆಂಗಳೂರು: ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳಲ್ಲಿ ರಾಜ್ಯಸರ್ಕಾರ ಒಂದು ವಾರ ಲಾಕ್ ಡೌನ್ ಘೋಷಿಸಿರುವ ಕಾರಣ ಈ ಜಿಲ್ಲೆಗಳಲ್ಲಿ ಎಸ್ಎಸ್ಎಲ್ ಸಿ ಮೌಲ್ಯಮಾಪನ ಮುಂದೂಡಿಕೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಹೇಳಿದರು.

Advertisement

ಈ ಬಾರಿಯ ಎಸ್ಎಸ್ಎಲ್ ಸಿ ಮೌಲ್ಯಮಾಪನ ಕಾರ್ಯವು ದಿನಾಂಕ ಸೋಮವಾರದಿಂದ ರಾಜ್ಯದ ಎಲ್ಲ ಜಿಲ್ಲಾಕೇಂದ್ರಗಳಲ್ಲಿ ಪ್ರಾರಂಭವಾಗಲಿದೆ. ಆದರೆ ರಾಜ್ಯ ಸರ್ಕಾರವು ಜುಲೈ 14ರಿಂದ ಜುಲೈ 22ರವರೆಗೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮೌಲ್ಯ ಮಾಪನವನ್ನು ಮುಂದೂಡಲಾಗಿದೆ ಎಂದರು.

ಈ ಎರಡು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಗಳ ಮೌಲ್ಯಮಾಪನ ಕಾರ್ಯವು ನಾಳೆಯಿಂದ ನಿಗದಿಯಂತೆ ನಡೆಯಲಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ಮೌಲ್ಯಮಾಪನ ದಿನಾಂಕವನ್ನು ಮುಂದಿನ ದಿನಗಳಲ್ಲಿ ನಿರ್ಧರಿಸಲಾಗುವುದು ಎಂದು ಶಿಕ್ಷಣ‌ ಸಚಿವರು ಸ್ಪಷ್ಟನೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next