Advertisement

ಕೋವಿಡ್-19 ಕಳವಳ: ರಾಜ್ಯದ ಎಸ್ ಎಸ್ ಎಲ್ ಸಿ ಪರೀಕ್ಷೆ ಮುಂದೂಡಿಕೆ, ಪಿಯು ಪರೀಕ್ಷೆ ಎಂದಿನಂತೆ

12:55 PM Mar 27, 2020 | keerthan |

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕು ಕಳವಳ ಹೆಚ್ಚುತ್ತಿದ್ದಂತೆ ಎಸ್ ಎಸ್ ಎಲ್ ಸಿ ಪಬ್ಲಿಕ್ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

Advertisement

ಇಂದು ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಬಿ ಎಸ್ ಯಡಿಯೂರಪ್ಪ ಈ ಮಾಹಿತಿ ನೀಡಿದರು.

ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಗಳನ್ನು ಮಾರ್ಚ್ 27ರಿಂದ ನಡೆಸಲು ಯೋಜಿಸಲಾಗಿತ್ತು. ಆದರೆ ಈಗ ಕೋವಿಡ್-19 ಭೀತಿಯ ಕಾರಣ ಪರೀಕ್ಷೆಗಳನ್ನು ಅನಿರ್ಧಿಷ್ಟಾವಧಿಗೆ ಮುಂದೂಡಲಾಗಿದೆ.

ಪಿಯುಸಿ ಪರೀಕ್ಷೆ ಎಂದಿನಂತೆ

ದ್ವಿತೀಯ ಪಿಯುಸಿ ಪರೀಕ್ಷೆಗಳು ಈಗಾಗಲೇ ಆರಂಭವಾಗಿದ್ದು, ನಾಳೆ (ಮಾರ್ಚ್ 23) ರಂದು ಅಂತಿಮ ಪರೀಕ್ಷೆಗಳು ನಡೆಯಲಿದೆ. ಇದು ಎಂದಿನಂತೆ ನಡೆಯಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next