Advertisement

ಎಸ್‌ಎಸ್‌ಎಲ್‌ಸಿ ಪರೀಕ್ಷೆ:ಸಿದ್ಧತಾ ಕಾರ್ಯ ಪೂರ್ಣ

07:14 AM Jun 23, 2020 | Suhan S |

ಸಿದ್ದಾಪುರ: ರಾಜ್ಯಾದ್ಯಂತ ಜೂ.25 ಗುರುವಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಗ್ರಾಮದ ಪರೀಕ್ಷಾ ಕೇಂದ್ರದಲ್ಲಿ ಸಿದ್ಧತೆ ನಡೆದಿದ್ದು, ಸೋಮವಾರ ಪರೀಕ್ಷಾ ಕೊಠಡಿಗಳಿಗೆ ಸ್ಯಾನಿಟೈಜ್‌ ಮಾಡಲಾಯಿತು. ಈ ಬಗ್ಗೆ ಮಾತನಾಡಿದ ಸಿದ್ದಾಪುರ ಪರೀಕ್ಷಾ ಕೇಂದ್ರದ ಅಧಿಧೀಕ್ಷಕ ಚಾಂದ್‌ ಪಾಷಾ, ಸಿದ್ದಾಪುರ ಪರೀಕ್ಷಾ ಕೇಂದ್ರದಲ್ಲಿ ಎಸ್‌ಎಸ್‌ಎಲ್‌ಸಿಯ ಒಟ್ಟು 290ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿಷಯವಾರು ಪರೀಕ್ಷೆ ಬರೆಯಲಿದ್ದಾರೆ.

Advertisement

ಸರಕಾರಿ ಪ್ರೌಢ ಶಾಲೆ, ಕಸ್ತೂರಿ ಬಾ ಗಾಂಧಿ ವಸತಿ ಶಾಲೆ, ಸರಕಾರಿ ಪಪೂ ಕಾಲೇಜು ಸೇರಿದಂತೆ ಒಟ್ಟು 23 ಕೊಠಡಿಗಳನ್ನು ಈಗಾಗಲೇ ಸಿದ್ಧತೆ ಮಾಡಿಕೊಂಡಿದ್ದು, ಇಂದು ಎಲ್ಲಾ ಕೊಠಡಿಗಳನ್ನು ಸ್ಯಾನಿಟೈಜ್‌ ಮಾಡಲಾಗಿದೆ. ಕೋವಿಡ್‌ 19 ಹಿನ್ನೆಲೆಯಲ್ಲಿ ಪರೀಕ್ಷೆ ಆರಂಭಕ್ಕೂ ಮುನ್ನ ಮೊದಲಿಗೆ ಪ್ರತಿಯೊಬ್ಬ ವಿದ್ಯಾರ್ಥಿಗಳನ್ನು ಥರ್ಮಲ್‌ ಸ್ಕ್ಯಾನಿಂಗ್‌ಗೆ ಒಳಪಡಿಸಿ, ಕೈಗಳಿಗೆ ಸ್ಯಾನಿಟೈಸರ್‌ ಸಿಂಪಡಿಸಿ, ಮಾಸ್ಕ್ ಕಡ್ಡಾಯಗೊಳಿಸಿಕೊಂಡ ನಂತರ ಆಯಾ ವಿದ್ಯಾರ್ಥಿಗಳನ್ನು ಪರೀಕ್ಷಾ ಕೊಠಡಿಯೊಳಕ್ಕೆ ಬಿಡಲಾಗುತ್ತೆ. ಥರ್ಮಲ್‌ ಸ್ಕ್ಯಾನಿಂಗ್‌ ವೇಳೆ ವಿದ್ಯಾರ್ಥಿಗಳಿಗೆ ಟೆಂಪರೇಚರ್‌ ಜಾಸ್ತಿ ಇದ್ದಲ್ಲಿ ಅಂತಹ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಎರಡು ಕೊಠಡಿಗಳನ್ನು ಮೀಸಲಿಡಲಾಗಿದ್ದು, ಆ ಕೊಠಡಿಯಲ್ಲಿ ಪರೀಕ್ಷೆ ಅವಕಾಶ ಮಾಡಿಕೊಡಲಾಗುತ್ತದೆ. ಸಾಮಾಜಿಕ ಅಂತರದೊಂದಿಗೆ ಒಂದು ಕೊಠಡಿಯಲ್ಲಿ 20 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗಿದೆ. ಎಲ್ಲಾ ಕೊಠಡಿಗಳಲ್ಲಿಯೂ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಪರೀಕ್ಷಾ ಕೇಂದ್ರದಿಂದ 200 ಮೀಟರ್‌ವರೆಗೆ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next