Advertisement

ಎಸೆಸೆಲ್ಸಿ , ಪಿಯುಸಿ ಪರೀಕ್ಷೆ : ಇಂದು ನಿರ್ಧಾರ

12:48 AM Jun 04, 2021 | Team Udayavani |

ಬೆಂಗಳೂರು: ಈಗಾಗಲೇ ಕೇಂದ್ರ ಮಟ್ಟದ ಸಿಬಿಎಸ್‌ಇ ಮತ್ತು ಐಸಿಎಸ್‌ಇಯ 10ನೇ ಹಾಗೂ 12ನೇ ತರಗತಿ ಪರೀಕ್ಷೆಗಳು ರದ್ದಾಗಿರುವ ಕಾರಣ, ರಾಜ್ಯದ ಎಸೆಸೆಲ್ಸಿ, ಪಿಯುಸಿ ಪರೀಕ್ಷೆಗಳ ಭವಿಷ್ಯ ಶುಕ್ರವಾರ ಹೊರಬೀಳಲಿದೆ.

Advertisement

ಬೆಳಗ್ಗೆ 10 ಗಂಟೆಗೆ ಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌ ಪತ್ರಿಕಾಗೋಷ್ಠಿ ಕರೆದಿದ್ದು, ಇದರಲ್ಲಿ ಪರೀಕ್ಷೆ ಕುರಿತು ತೀರ್ಮಾನ ಪ್ರಕಟಿಸುವ ಸಾಧ್ಯತೆ ಇದೆ.

ಕೇಂದ್ರ ಸರಕಾರದ ಪರೀಕ್ಷೆ ರದ್ದು ವಿಚಾರವಾಗಿ ಗುರುವಾರ ಅಧಿಕಾರಿಗಳ ಜತೆ ಸುರೇಶ್‌ ಕುಮಾರ್‌ ಸುದೀರ್ಘ‌ ಚರ್ಚೆ ನಡೆಸಿದ್ದಾರೆ. ಅತ್ತ ವಿಧಾನ

ಸೌಧದಲ್ಲಿ ಮಾತನಾಡಿದ್ದ ಸಿಎಂ ಯಡಿಯೂರಪ್ಪ

ಅವರು, ಎಸೆಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ. ಕೇಂದ್ರ ಸರಕಾರ ಪರೀಕ್ಷೆಗಳನ್ನು ರದ್ದು ಮಾಡಿದೆ. ರಾಜ್ಯವೂ ಚರ್ಚಿಸಿ ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next