Advertisement

SSLC ಫಲಿತಾಂಶ ಕುಸಿತ: ಡಿಡಿಪಿಐ ಅಮಾನತಿಗೆ ಸಿದ್ದರಾಮಯ್ಯ ಆದೇಶ

12:31 AM Jun 22, 2024 | Team Udayavani |

ಹೊಸಪೇಟೆ: ವಿಜಯನಗರ ಜಿಲ್ಲೆಯ ಅಧಿಕಾರಿಗಳ ಕಾರ್ಯವೈಖರಿಯಿಂದ ನಾನು ಅಸಂತುಷ್ಟನಾಗಿದ್ದೇನೆ. ಜಿಲ್ಲೆಯ ಅಧಿ ಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಬೇಕು. ಎಸೆಸೆಲ್ಸಿ ಫಲಿತಾಂಶದಲ್ಲಿ ಹತ್ತನೇ ಸ್ಥಾನದಲ್ಲಿದ್ದ ಜಿಲ್ಲೆ ಈಗ 27ನೇ ಸ್ಥಾನಕ್ಕೆ ಕುಸಿದಿದೆ. ಈ ಕೂಡಲೇ ಡಿಡಿಪಿಐ ಅಮಾನತುಗೊಳಿಸುತ್ತೇನೆ. ಈ ಮೂಲಕ ಜಿಲ್ಲೆಯ ಅ ಧಿಕಾರಿಗಳಿಗೆ ಎಚ್ಚರಿಕೆ ರವಾನಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Advertisement

ನಗರದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶುಕ್ರವಾರ ನಡೆದ ವಿಜಯನಗರ ಜಿಲ್ಲಾ ಪ್ರಗತಿ ಪರಿಶೀಲನ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಎಸೆಸೆಲ್ಸಿ ಫಲಿತಾಂಶದಲ್ಲಿ ವಿಜಯನಗರ ಜಿಲ್ಲೆ ಭಾರೀ ಪ್ರಮಾಣದಲ್ಲಿ ಕುಸಿದಿದೆ. ಹಾಗಾಗಿ ಡಿಡಿಪಿಐ ಯುವರಾಜ್‌ ನಾಯ್ಕ ಅವರನ್ನು ಅಮಾನತುಗೊಳಿಸಲು ಮತ್ತು ಜಿ.ಪಂ. ಸಿಇಒ ಸದಾಶಿವ ಪ್ರಭು ಅವರಿಗೂ ನೋಟಿಸ್‌ ನೀಡಲು ಸೂಚಿಸಿರುವೆ. ಜಿಲ್ಲೆಯ ಎಲ್ಲ ತಾಲೂಕುಗಳ ಬಿಇಒಗಳಿಗೆ ನೋಟಿಸ್‌ ಜಾರಿ ಮಾಡಲು ಕೂಡ ಶಿಕ್ಷಣ ಇಲಾಖೆಯ ಪ್ರಧಾನಕಾರ್ಯದರ್ಶಿಗೆ ಸೂಚಿಸಲಾಗಿದೆ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next