Advertisement

ನಾಳೆಯಿಂದ ಎಸೆಸೆಲ್ಸಿ ಪೂರಕ ಪರೀಕ್ಷೆ: ಆಗಸ್ಟ್‌ ಮೊದಲ ವಾರ ಫ‌ಲಿತಾಂಶ

12:06 AM Jun 26, 2022 | Team Udayavani |

ಬೆಂಗಳೂರು: ಎಸೆಸೆಲ್ಸಿ ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣ ರಾಗಿರುವ ಅಭ್ಯರ್ಥಿಗಳಿಗೆ ರಾಜ್ಯಾದ್ಯಂತ ಜೂ.27ರಿಂದ ಜು.4ರ ವರೆಗೆ ಪೂರಕ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ.

Advertisement

ಪರೀಕ್ಷೆಗೆ 11,415 ಶಾಲೆಗಳಿಂದ 63,363 ವಿದ್ಯಾರ್ಥಿ ಗಳು, 31,283 ವಿದ್ಯಾರ್ಥಿನಿಯರು ಹಾಗೂ ಮೂವರು ತೃತೀಯ ಲಿಂಗಿಗಳು ಸಹಿತ ಒಟ್ಟಾರೆ 94,649 ಮಕ್ಕಳು ನೋಂದಣಿ ಮಾಡಿಕೊಂಡಿದ್ದಾರೆ. ರಾಜ್ಯಾದ್ಯಂತ 423 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಈ ಪೈಕಿ 343 ಸಾಮಾನ್ಯ ಮತ್ತು 80 ಖಾಸಗಿ ಕೇಂದ್ರಗಳನ್ನು ನಿಗದಿ ಮಾಡಲಾಗಿದೆ.

ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿಟಿವಿ ಕೆಮರಾಗಳನ್ನು ಕಡ್ಡಾಯವಾಗಿ ಅಳವಡಿಸಲು ಕ್ರಮ ವಹಿಸಲಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಗಳ ಸುರಕ್ಷೆ ದೃಷ್ಟಿಯಿಂದ ಮುಖ್ಯ ಪರೀಕ್ಷೆಗೆ ಅಳವಡಿಸಿಕೊಂಡಿದ್ದ ಮಾರ್ಗಸೂಚಿ ಯನ್ನೇ ಪೂರಕ ಪರೀಕ್ಷೆಗೂ ಅಳವಡಿಸಿಕೊಳ್ಳಲು ನಿರ್ದೇಶನ ನೀಡಲಾಗಿದೆ.

ಆಗಸ್ಟ್‌ ಮೊದಲ ವಾರ ಫ‌ಲಿತಾಂಶ
ಪೂರಕ ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ಜು.11ರಿಂದ ರಾಜ್ಯಾದ್ಯಂತ 5 ಜಿಲ್ಲೆಗಳ 28 ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆಸಲಾಗುವುದು. ಆಗಸ್ಟ್‌ ಮೊದಲನೇ ವಾರದಲ್ಲಿ ಫ‌ಲಿತಾಂಶ ಪ್ರಕಟಿಸಲು ಮಂಡಳಿ ಗುರಿ ಹೊಂದಿದೆ ಎಂದು ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕ ಎಚ್‌.ಎನ್‌. ಗೋಪಾಲಕೃಷ್ಣ ತಿಳಿಸಿದ್ದಾರೆ.

ಸಿಇಟಿ ಅಭ್ಯರ್ಥಿಗಳ ಅರ್ಜಿ ತಿದ್ದುಪಡಿಗೆ ಅವಕಾಶ
ಬೆಂಗಳೂರು: ಸಿಇಟಿ ಅಭ್ಯರ್ಥಿಗಳು ತಮ್ಮ ಅರ್ಜಿಯ ಮಾಹಿತಿ ತಿದ್ದುಪಡಿ ಹಾಗೂ ಮೀಸಲಾತಿಯನ್ನು ಕ್ಲೇಮ್‌ ಮಾಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕೊನೆಯ ಅವಕಾಶ ನೀಡಿದ್ದು, ಈ ತಿಂಗಳ 28ರೊಳಗೆ ತಿದ್ದುಪಡಿ ಮಾಡಿಕೊಳ್ಳಬಹುದಾಗಿದೆ.

Advertisement

ಸಿಇಟಿ ಫ‌ಲಿತಾಂಶ ಘೋಷಿಸಿದ ಬಳಿಕ ಯಾವುದೇ ರೀತಿಯಲ್ಲಿ ಮಾಹಿತಿ ತಿದ್ದುಪಡಿಗೆ ಅವಕಾಶ ಇರುವುದಿಲ್ಲ. ಆದ್ದರಿಂದ ಅಭ್ಯರ್ಥಿಗಳು ಹಾಗೂ ಪೋಷಕರು ತಮ್ಮ ಅರ್ಜಿಗಳನ್ನು ಮತ್ತೊಮ್ಮೆ ಕಡ್ಡಾಯವಾಗಿ ಪರಿಶೀಲಿಸಿಕೊಳ್ಳುವಂತೆ ಕೆಇಎ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next