Advertisement

ಜ. 22ರಿಂದ26 : ಅತ್ತೂರು ಸಂತ ಲಾರೆನ್ಸ್‌ ಬಸಿಲಿಕ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ

04:35 PM Jan 05, 2023 | Team Udayavani |

ಕಾರ್ಕಳ: ಅತ್ತೂರು ಸಂತ ಲಾರೆನ್ಸ್‌ ಬಸಿಲಿಕ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವವು ಜ. 22ರಿಂದ 26ರ ವರೆಗೆ ಜರಗಲಿದೆ.

Advertisement

ನೀವು ನನಗೆ ಸಾಕ್ಷಿಗಳಾಗುವಿರಿ ಎಂಬ ಮಹೋತ್ಸವದ ವಿಷಯದೊಂದಿಗೆ ನಡೆಯುವ ಈ 5 ದಿನಗಳ ಉತ್ಸವದ ಅವಧಿಯಲ್ಲಿ ಒಟ್ಟು 35 ಬಲಿ ಪೂಜೆಗಳು ನಡೆಯಲಿದೆ.

ಜ. 22ರ ಪೂರ್ವಾಹ್ನ 10 ಗಂಟೆಗೆ (ಕೊಂಕಣಿ) ಉಡುಪಿಯ ಧರ್ಮಾಧ್ಯಕ್ಷ ಪ|ಪೂ| ಜೆರಾಲ್ಡ್‌ ಐಸಾಕ್‌ ಲೋಬೋ, ಜ. 23ರಂದು ಬೆಳಿಗ್ಗೆ 10 ಗಂಟೆಗೆ (ಕನ್ನಡ) ಪುತ್ತೂರಿನ ಧರ್ಮಾಧ್ಯಕ್ಷ ಪ|ಪೂ| ಜೀವರ್ಗಿಸ್‌ ಮಾರ್‌ ಮಕರಿಯೋಸ್‌ ಕಲಯಿಲ್‌, ಜ. 24ರಂದು ಸಂಜೆ 6.00 ಗಂಟೆಗೆ (ಕನ್ನಡ) ಬೆಳ್ತಂಗಡಿ ಧರ್ಮಾಧ್ಯಕ್ಷ ಪ|ಪೂ| ಲೊರೆನ್ಸ್‌ ಮುಕ್ಕುಝಿ, ಜ. 25ರಂದು ಬೆಳಿಗ್ಗೆ 10.00 ಗಂಟೆಗೆ (ಕೊಂಕಣಿ) ಮಂಗಳೂರಿನ ನಿವೃತ್ತ ಧರ್ಮಾಧ್ಯಕ್ಷ ಪ|ಪೂ| ಆಲೋಷಿಯಸ್‌ ಪಾವ್ಲ್ ಡಿಸೋಜಾ , ಜ. 26ರಂದು ಬೆಳಿಗ್ಗೆ 10.00 ಗಂಟೆಗೆ (ಕೊಂಕಣಿ) ಬೆಂಗಳೂರಿನ ನಿವೃತ್ತ ಮಹಾ ಧರ್ಮಾಧ್ಯಕ್ಷ ಪ|ಪೂ| ಬರ್ನಾರ್ಡ್‌ ಮೊರಾಸ್‌ ಅವರು ಮಹೋತ್ಸವದ ಪ್ರಮುಖ ಸಂಭ್ರಮದ ಬಲಿಪೂಜೆ ನೆರವೇರಿಸಲಿರುವರು.

Advertisement

Udayavani is now on Telegram. Click here to join our channel and stay updated with the latest news.

Next