Advertisement

ಸಹಕಾರ ಸಚಿವ ಸೋಮಶೇಖರ್‌ ಧರ್ಮಸ್ಥಳಕ್ಕೆ

11:13 AM Feb 27, 2020 | sudhir |

ಬೆಳ್ತಂಗಡಿ: ರಾಜ್ಯ ಸಹಕಾರ ಹಾಗೂ ಕೃಷಿ ಮಾರುಕಟ್ಟೆ ಸಚಿವ ಎಸ್‌. ಟಿ. ಸೋಮಶೇಖರ್‌ ಬುಧವಾರ ಬೆಳ್ತಂಗಡಿಯಲ್ಲಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಮಂಗಳವಾರ ಸಂಜೆ ಧರ್ಮಸ್ಥಳಕ್ಕೆ ಆಗಮಿಸಿದ ಅವರನ್ನು ಶಾಸಕ ಹರೀಶ್‌ ಪೂಂಜ ಸ್ವಾಗತಿಸಿದರು.

Advertisement

ಬುಧವಾರ ಸಚಿವರು ಕೃಷಿ ಮಾರಾಟ ಇಲಾಖೆ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವತಿಯಿಂದ ನಿರ್ಮಾಣಗೊಂಡ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಿಲಾನ್ಯಾಸ, ಕಾಂಕ್ರೀಟ್‌ ರಸ್ತೆಗಳ ಉದ್ಘಾಟನೆ, ಶಿಲಾನ್ಯಾಸ ನೆರವೇರಿಸುವರು. ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಸಂಸದ ನಳೀನ್‌ ಕುಮಾರ್‌, ವಿಧಾನಪರಿಷತ್‌ ಸದಸ್ಯ ಐವನ್‌ ಡಿ’ಸೋಜಾ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಕೇಶವ ಗೌಡ ಪಿ. ಭಾಗವಹಿಸುವರು.

ಮಧ್ಯಾಹ್ನ 1.30ಕ್ಕೆ ಬೆಳ್ತಂಗಡಿ ಮಂಜುನಾಥೇಶ್ವರ ಕಲಾಭವನದಲ್ಲಿ ತಾಲೂಕಿನ ಸಹಕಾರ ಸಂಘಗಳ ನಿರ್ದೇಶಕರು, ಹಾಲು ಉತ್ಪಾದಕರ ಸಂಘದ ನಿರ್ದೇಶಕರ ಸಂವಾದ ಕಾರ್ಯಕ್ರಮ ಸಚಿವರೊಂದಿಗೆ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next