Advertisement

ಶರದ್ ಪವಾರ್ ನಿವಾಸದೆದುರು ಪ್ರತಿಭಟನೆ : ಸುಪ್ರಿಯಾ ಸುಳೆ ಭದ್ರತೆ ಹೆಚ್ಚಳ

04:27 PM Apr 09, 2022 | Team Udayavani |

ಮುಂಬಯಿ : ಎನ್‌ಸಿಪಿ ನಾಯಕ ಶರದ್ ಪವಾರ್ ಅವರ ನಿವಾಸದ ಮುಂದೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದ ನಂತರ ಮಹಾರಾಷ್ಟ್ರ ಗೃಹ ಇಲಾಖೆ ಎನ್‌ಸಿಪಿ ನಾಯಕಿ ಸುಪ್ರಿಯಾ ಸುಳೆ ಅವರ ಭದ್ರತೆಯನ್ನು ಹೆಚ್ಚಿಸಿದೆ.

Advertisement

ಇದೆ ವೇಳೆ ಪ್ರತಿಭಟನೆ ಒಂದು ಪಿತೂರಿಯಾಗಿದೆ. ಇದರ ಹಿಂದೆ ಯಾರಿದ್ದಾರೆ ಎಂಬುದು ಶೀಘ್ರವೇ ಬಹಿರಂಗವಾಗಲಿದೆ ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಹೇಳಿದ್ದಾರೆ.

ಶರದ್ ಪವಾರ್ ಗೂ ರಸ್ತೆ ಸಾರಿಗೆ ಸಂಸ್ಥೆಯ ನೌಕರರ ಮುಷ್ಕರಕ್ಕೂ ಯಾವುದೇ ಸಂಬಂಧವಿಲ್ಲ. ಯಾರೋ ಮಹಾರಾಷ್ಟ್ರದ ರಾಜಕೀಯ ಮತ್ತು ಸಾಮಾಜಿಕ ವಾತಾವರಣವನ್ನು ಕದಡಲು ಪ್ರಯತ್ನಿಸುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ.

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕಾರ್ಯಕರ್ತರು ಶುಕ್ರವಾರ ಪವಾರ್ ಅವರ ನಿವಾಸದ ಎದುರು ಪ್ರತಿಭಟನೆ ನಡೆಸಿ ಘೋಷಣೆಗಳನ್ನು ಕೂಗಿ ಕಲ್ಲುಗಳು, ಚಪ್ಪಲಿಗಳನ್ನು ಕಾಂಪೌಂಡ್ ನ ಒಳಗೆ ತೂರಿದ್ದರು. ಪ್ರತಿಭಟನೆ ನಡೆಸಿದ ನೂರಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next