Advertisement
ಘಟನೆಯಲ್ಲಿ ಹಿಂದೂ ಜಾಗರಣ ವೇದಿಕೆಯ ಮುಖಂಡ ರತ್ನಾಕರ ಶೆಟ್ಟಿ ಮತ್ತು ರವಿ ಭಂಡಾರಿ ಗಾಯಗೊಂಡಿದ್ದು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೇ ವೇಳೆ ಖಲೀಲ್ ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ದುಷ್ಕರ್ಮಿಗಳ ಕಲ್ಲೆಸೆತದಿಂದ ಬಂಟ್ವಾಳ ನಗರ ಠಾಣೆ ಎಸ್ಐ ರಕ್ಷಿತ್ ತಲೆಗೆ ಗಂಭೀರ ಗಾಯವಾಗಿದೆ. ವೃತ್ತ ನಿರೀಕ್ಷಕ ಬಿ.ಕೆ. ಮಂಜಯ್ಯ ಸಹಿತ ಹಲವು ಮಂದಿ ಪೊಲೀಸ್ ಸಿಬಂದಿ ಮೇಲೆ ಹಲ್ಲೆ ಮಾಡಲಾಗಿದೆ. ಪೊಲೀಸರಿಗೆ ಪರಿಚಿತರಾಗಿರುವ ವ್ಯಕ್ತಿಗಳೇ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.
Related Articles
Advertisement
ಪೂರ್ವಯೋಜಿತ ?ರತ್ನಾಕರ ಶೆಟ್ಟಿ ಅವರು ಸ್ಥಳೀಯ ಆಸ್ಪತ್ರೆಗೆ ಪುತ್ರನನ್ನು ಕರೆತಂದು ಔಷಧ ಪಡೆದುಕೊಂಡು ಮರಳುತ್ತಿರುವಾಗ ಖಲೀಲ್ ಮೀಸೆ ತಿರುವಿಕೊಂಡು ಮಾತನಾಡಿದ್ದು, ಇದೇ ವೇಳೆ ಹಿಂದಿನಿಂದ ಬಂದ ಜುನೈಜ್ ಹಲ್ಲೆ ನಡೆಸಿ ಇರಿದಿದ್ದಾನೆ ಎಂದು ಸಿಸಿ ಕೆಮರಾ ದೃಶ್ಯಗಳನ್ನು ಆಧರಿಸಿ ಹೇಳಲಾಗಿದೆ. ಪೂರ್ವಯೋಜಿತವಾಗಿ ಹಲ್ಲೆ, ಕಲ್ಲೆಸೆತ ನಡೆದಿದೆ ಎನ್ನಲಾಗಿದೆ ನಿಷೇಧಾಜ್ಞೆ ಇದ್ದರೂ…
ಕಲ್ಲಡ್ಕದಲ್ಲಿ ಮೇ 26ರಂದು ಚೂರಿ ಇರಿತದ ಘಟನೆಯ ಬಳಿಕ ಪೊಲೀಸರು ನಿಷೇಧಾಜ್ಞೆ ಜಾರಿ ಮಾಡಿದ್ದು ಜೂ. 16ರ ತನಕ ಮುಂದುವರಿಸಲಾಗಿತ್ತು. ಇದನ್ನು ಲೆಕ್ಕಿಸದ ಗುಂಪು ಪೊಲೀಸ್ ವಾಹನಕ್ಕೂ ಕಲ್ಲೆಸೆದು ಹಾನಿ ಮಾಡಿದೆ. ಸೋಮವಾರ ಕನ್ಯಾನದಲ್ಲಿ ಕೋಮು ಗಲಭೆಯ ಕಾರಣ ಬಹುತೇಕ ಪೊಲೀಸ್ ಬಲವನ್ನು ಅಲ್ಲಿಗೆ ಕಳುಹಿಸಿದ್ದು ಕಲ್ಲಡ್ಕದಲ್ಲಿ ಬೆರಳೆಣಿಕೆಯ ಪೊಲೀಸರು ಇದ್ದುದರಿಂದ ಪೂರ್ವಯೋಜಿತವಾಗಿ ಕೃತ್ಯ ನಡೆಸಿದ್ದಾಗಿ ಶಂಕೆ ವ್ಯಕ್ತವಾಗಿದೆ. ಸುಗಮ ಸಂಚಾರಕ್ಕೆ ಅನುವು
ಪೇಟೆಯಲ್ಲಿ ದಾಂಧಲೆ ನಡೆಸಿದ್ದರಿಂದ ಸಂಜೆ 5.30ರಿಂದ ಸುಮಾರು ಒಂದು ಗಂಟೆ ಸಮಯ ವಾಹನ ಸಂಚಾರ ಸ್ಥಗಿತಗೊಂಡಿತು. ಈ ಸಂದರ್ಭ ಕೆಲವೇ ಪೊಲೀಸರು ಸ್ಥಳದಲ್ಲಿದ್ದುದರಿಂದ ಇತರ ಠಾಣೆಗಳಿಗೆ ಮಾಹಿತಿ ನೀಡಿ ವಾಹನಗಳು ಬಿ.ಸಿ.ರೋಡ್ನಲ್ಲಿ ಬೆಳ್ತಂಗಡಿ ಮಾರ್ಗವಾಗಿ ಹೋಗುವಂತೆ ಮತ್ತು ಶಂಭೂರಿನಲ್ಲಿ ವಯಾ ಬಾಳ್ತಿಲವಾಗಿ ಹೋಗುವಂತೆ ಸೂಚಿಸಲಾಯಿತು. ಈ ಮೂಲಕ ರಾ.ಹೆ. 73ರಲ್ಲಿನ ವಾಹನ ಸಂಚಾರವನ್ನು ನಿಯಂತ್ರಿಸಲಾಯಿತು. ಕಲ್ಲಡ್ಕಕ್ಕಿಂತ ಸುಮಾರು 2 ಕಿ.ಮೀ. ದೂರದಲ್ಲಿಯೇ ವಾಹನಗಳನ್ನು ತಡೆ ಹಿಡಿಯಲಾಯಿತು. ಪೊಲೀಸ್ ತಂಡ ಸ್ಥಳಕ್ಕೆ ತಲುಪುತ್ತಿದ್ದಂತೆ ವಾಹನ ಸಂಚಾರಕ್ಕೆ ಅನುವು ಮಾಡಿಕೊಳ್ಳಲಾಯಿತು. ಪೊಲೀಸರು ರಸ್ತೆಯ ಎರಡೂ ಬದಿಯಲ್ಲಿ ನಿಂತು ವಾಹನಗಳ ಸುಗಮ ಸಂಚಾರಕ್ಕೆ ಅವಕಾಶ ಮಾಡಿದರು. ಸಿಸಿ ಕೆಮರಾದಲ್ಲಿ ದಾಖಲು?
ಮೇ 26ರ ಘಟನೆಯ ಬಳಿಕ ಪೊಲೀಸರು ನಗರದ 30 ಕಡೆಗಳಲ್ಲಿ ಸುಧಾರಿತ ಸಿಸಿ ಕೆಮರಾಗಳನ್ನು ಅಳವಡಿಸಿದ್ದಾರೆ. ಮಂಗಳ ವಾರ ನಡೆದ ಎಲ್ಲ ಘಟನೆಗಳು ಇದರಲ್ಲಿ ದಾಖಲಾಗಿವೆ ಎಂದು ಮೂಲಗಳು ತಿಳಿಸಿವೆ. ಪೊಲೀಸರು ಈ ವೀಡಿಯೊ ಗಳನ್ನು ಪರಿಶೀಲಿಸಿ ದುಷ್ಕರ್ಮಿಗಳನ್ನು ಬಂಧಿಸಲು ನಿರ್ಧರಿಸಿದ್ದಾರೆ.