Advertisement

ಮೊಗದಲ್ಲಿ ನಗು ತಂದ ಸ್ತಬ್ಧ ಚಿತ್ರ

03:20 PM Jun 12, 2023 | Team Udayavani |

“ಸ್ತಬ್ಧ’ ಎಂಬ ಚಿತ್ರವೊಂದು ಕಳೆದ ವಾರ ತೆರೆಕಂಡಿತ್ತು. ಹಾರರ್‌-ಥ್ರಿಲ್ಲರ್‌ ಜಾನರ್‌ನಲ್ಲಿ ಮೂಡಿಬಂದಿರುವ ಈ ಚಿತ್ರಕ್ಕೆ ಈಗ ಮೆಚ್ಚುಗೆ ವ್ಯಕ್ತವಾಗುವ ಮೂಲಕ ಚಿತ್ರತಂಡ ಖುಷಿಯಾಗಿದೆ.

Advertisement

ಚಿತ್ರದಲ್ಲಿ ಪ್ರತಾಪ ಸಿಂಹ ಹಾಗೂ ಹರ್ಷಿಕಾ ಪೂಣಚ್ಛ ನಾಯಕ-ನಾಯಕಿಯಾಗಿ ನಟಿಸಿದ್ದು, ರಾಘವೇಂದ್ರ ರಾಜ್‌ಕುಮಾರ್‌ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಡಾ.ವಿದ್ಯಾಸಾಗರ್‌ ಅವರು ನಿರ್ಮಿಸಿರುವ ಚಿತ್ರವನ್ನು ಲಾಲಿ ರಾಘವ ನಿರ್ದೇಶಿಸಿದ್ದಾರೆ. ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಲಾಲಿ ರಾಘವ್‌, “ಸಿನಿಮಾ ನೋಡಿದವರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಫ್ಯಾಮಿಲಿ ಡ್ರಾಮಾದ ಜೊತೆಗೆ ಹಾರರ್‌ ಅಂಶಗಳು ಜನರನ್ನು ಸೆಳೆಯುತ್ತಿವೆ. ಸಿನಿಮಾ ನೋಡಿದ ಕೆಲವರು “ಚಂದ್ರಮುಖಿ’ ಸಿನಿಮಾ ನೋಡಿದಂತಾಯಿತು ಎಂಬ ಕಾಮೆಂಟ್‌ ಬರುತ್ತಿದೆ. ಈ ಮೂಲಕ ಒಂದೊಳ್ಳೆಯ ಸಿನಿಮಾಕ್ಕೆ ಪ್ರೇಕ್ಷಕ ಪ್ರೋತ್ಸಾಹ ನೀಡುತ್ತಿದ್ದಾರೆ’ ಎನ್ನುವುದು ನಿರ್ದೇಶಕರ ಮಾತು.

ನಾಯಕ ಪ್ರತಾಪ್‌ ಸಿಂಹ ಕೂಡಾ ಚಿತ್ರಕ್ಕೆ ಸಿಗುತ್ತಿರುವ ಪ್ರತಿಕ್ರಿಯೆಯಿಂದ ಖುಷಿಯಾಗಿದ್ದಾರೆ. ಈ ಮೂಲಕ ಭವಿಷ್ಯದ ಭರವಸೆ ಮೂಡಿಸಿದ್ದಾರೆ.

“ಸ್ಥಬ್ಧ ಇದೊಂದು ಭ್ರಮೆಯ ಸುತ್ತ ನಡೆಯುವ ಕಥೆ. ಹಾರರ್‌, ಸಸ್ಪೆನ್ಸ್ ಥ್ರಿಲ್ಲರ್‌ ಎನ್ನಬಹುದು. 45 ದಿನಗಳ ಕಾಲ ಬೆಂಗಳೂರು, ಮಂಗಳೂರು, ಉಡುಪಿಯಲ್ಲಿ ಚಿತ್ರೀಕರಣ ನಡೆದಿದೆ.

Advertisement

ಹರ್ಷಿಕಾ ಪೂಣಚ್ಛ, ರಾಘವೇಂದ್ರ ರಾಜಕುಮಾರ್‌, ಪ್ರಿಯಾಂಕ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಪಿ.ವಿ.ಆರ್‌ ಸ್ವಾಮಿ ಅವರ ಛಾಯಾಗ್ರಹಣವಿದೆ.

Advertisement

Udayavani is now on Telegram. Click here to join our channel and stay updated with the latest news.

Next