Advertisement

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

01:11 PM Mar 28, 2024 | Team Udayavani |

ಉತ್ತರಾಖಂಡ: ಗುರುವಾರ ಮುಂಜಾನೆ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ದೇಗುಲದ ಆವರಣದಲ್ಲಿದ್ದ ಸಿಬಂದಿಯೋರ್ವನನ್ನು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಉತ್ತರಾಖಂಡದ ನಾನಕ್‌ಮಟ್ಟಾ ಸಾಹಿಬ್ ಗುರುದ್ವಾರದ ಬಳಿ ನಡೆದಿದೆ.

Advertisement

ದುಷ್ಕರ್ಮಿಗಳ ತಂಡ ಸಿಬ್ಬಂದಿಯನ್ನು ಹತ್ಯೆಗೈದಿರುವ ಭಯಾನಕ ದೃಶ್ಯ ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಮೃತರನ್ನು ಗುರುದ್ವಾರದ ಸಿಬಂದಿ ಬಾಬಾ ತಾರ್ಸೆಮ್ ಸಿಂಗ್ ಎಂದು ಗುರುತಿಸಲಾಗಿದೆ. ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಘಟನೆ ಸಂಬಂಧ ಮಾಹಿತಿ ನೀಡಿದ ಉತ್ತರಾಖಂಡ ಪೊಲೀಸ್ ಮಹಾನಿರ್ದೇಶಕ ಇಂದು ಬೆಳಿಗ್ಗೆ ಸುಮಾರು ಏಳು ಗಂಟೆಯ ವೇಳೆಗೆ ಕೊಲೆ ನಡೆದಿದ್ದು ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿದೆ ಆದಷ್ಟು ಬೇಗ ಕೊಲೆ ಆರೋಪಿಗಳನ್ನು ಪತ್ತೆಹಚ್ಚಲಾಗುವುದು ಎಂದು ಹೇಳಿದ್ದಾರೆ. ಅಲ್ಲದೆ ಘಟನೆಯ ದೃಶ್ಯ ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಇಬ್ಬರು ಮುಸುಕುಧಾರಿಗಳು ಬೈಕ್ ನಲ್ಲಿ ಬಂದು ಬಾಬಾ ತಾರ್ಸೆಮ್ ಸಿಂಗ್ ಮೇಲೆ ಗುಂಡಿನ ದಾಳಿ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next