Advertisement

Lok Sabha Election; ಸ್ಟಾರ್‌ ಪ್ರಚಾರಕರ ತೀರ್ಮಾನ ಪಕ್ಷದ್ದು: ಬೊಮ್ಮಾಯಿ

10:35 PM Mar 26, 2024 | Team Udayavani |

ಹಾವೇರಿ: ಚುನಾವಣ ಪ್ರಚಾರಕ್ಕೆ ಬರುವ ಸ್ಟಾರ್‌ ಪ್ರಚಾರಕರ ಜತೆ ಮಾತುಕತೆ ನಡೆಯುತ್ತಿದೆ. ಈ ಬಗ್ಗೆ ಪಕ್ಷ ತೀರ್ಮಾನಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ, ಹಾವೇರಿ-ಗದಗ ಲೋಕಸಭಾ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

ಹಾನಗಲ್ಲ ತಾಲೂಕಿನ ಮಾಸಣಕಟ್ಟಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ ಜನರಿಂದ ಅದ್ಭುತವಾದ ಪ್ರತಿಕ್ರಿಯೆ ಸಿಗುತ್ತಿದೆ. ಜನ ಬೆಂಬಲ ಕೊಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಗಾಳಿ ಕರ್ನಾಟಕದ ಉದ್ದಗಲಕ್ಕೂ ಇದೆ ಎಂದರು.

ಹಲವು ಕ್ಷೇತ್ರಗಳಿಗೆ ಹಾಲಿ ಬಿಜೆಪಿ ಅಭ್ಯರ್ಥಿಗಳ ಬದಲಾವಣೆಗೆ ಒತ್ತಡ ಹೇರುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕರಡಿ ಸಂಗಣ್ಣ ಜತೆ ಮಾತಾಡಿದ್ದೇನೆ. ಪಕ್ಷದ ತೀರ್ಮಾನ ಒಪ್ಪಿದ್ದಾರೆ. ದಾವಣಗೆರೆಯದ್ದೂ ಸರಿಯಾಗಲಿದೆ. ಬುಧವಾರ ಯಡಿಯೂರಪ್ಪ ಬೆಳಗಾವಿಗೆ ಹೋಗುತ್ತಾರೆ. ಅಲ್ಲೂ ಕೂಡ ಸರಿಯಾಗುತ್ತದೆ ಎಂದರು.

ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆಗೆ ಬೆಂಬಲ ನೀಡಲ್ಲ ಎಂಬ ಶಾಸಕ ಎಸ್‌.ಟಿ. ಸೋಮಶೇಖರ ಹೇಳಿಕೆಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ಉಹಾಪೋಹಗಳಿಗೆ ನಾನು ಉತ್ತರ ಕೊಡಲ್ಲ. ಅವರವರ ನಿರ್ಣಯಕ್ಕೆ ಅವರೇ ಉತ್ತರ ಕೊಡುತ್ತಾರೆ ಎಂದರು.

ಯಡಿಯೂರಪ್ಪ ಆಪ್ತರಿಗೆ ಸಿಎಂ ಸಿದ್ದರಾಮಯ್ಯ ಗಾಳ ಹಾಕಿರುವ ಕುರಿತು ಕೇಳಿದ ಪ್ರಶ್ನೆಗೆ ಚುನಾವಣೆ ಯುದ್ಧ ಭೂಮಿಯಲ್ಲಿ ಅವರವರ ರಣತಂತ್ರ ಅವರು ಮಾಡುತ್ತಾರೆ. ನಮ್ಮ ರಣತಂತ್ರ ನಾವು ಮಾಡುತ್ತೇವೆ. ಜನ ಮಾಲಕರು, ತೀರ್ಮಾನ ಮಾಡುತ್ತಾರೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next