Advertisement

ಸಚಿವರ ಬೆಂಬಲಕ್ಕಾಗಿ ಲಾಬಿ ಶುರು

12:59 AM Mar 14, 2018 | Team Udayavani |

ಬೆಂಗಳೂರು: ಲಿಂಗಾಯತ ಸಮುದಾಯಕ್ಕೆ ಅಲ್ಪ ಸಂಖ್ಯಾತರ ಮಾನ್ಯತೆ ನೀಡುವ ಕುರಿತು ಬುಧವಾರ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಯಲಿದ್ದು, ಇದಕ್ಕೂ ಮುನ್ನವೇ ಲಿಂಗಾಯತ ಮತ್ತು ವೀರ ಶೈವ ಬಣಗಳ ಸಚಿವರು ತಮ್ಮ ಪರವಾಗಿ ಹಿರಿಯ ಸಚಿವರ ಬೆಂಬಲ ಪಡೆಯಲು ಓಲೈಕೆ ಯತ್ನ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

Advertisement

ಸಂಜೆ 6 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಂಪುಟ ಸಭೆ ನಡೆಯಲಿದೆ. ಜಲ ಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್‌, ವಿನಯ್‌ ಕುಲಕರ್ಣಿ, ಬಸವರಾಜ ರಾಯರೆಡ್ಡಿ, ಡಾ. ಶರಣ ಪ್ರಕಾಶ್‌ ಪಾಟೀಲ್‌ ಲಿಂಗಾಯತ ಪ್ರತ್ಯೇಕ ಧರ್ಮದ
ಪರವಾಗಿ ವಾದ ಮಾಡುತ್ತಿದ್ದು, ಈಶ್ವರ್‌ ಖಂಡ್ರೆ ಹಾಗೂ ಎಸ್‌.ಎಸ್‌. ಮಲ್ಲಿಕಾರ್ಜುನ ವೀರಶೈವರ ಪರನಿಂತಿದ್ದಾರೆ. ವೀರಶೈವ ಹಾಗೂ ಲಿಂಗಾಯತ ಬಣದ ಸಚಿವರು ತಮ್ಮ ಪರವಾಗಿ ನಿಲ್ಲುವಂತೆ ಹಿರಿಯ ಸಚಿವರನ್ನು ಓಲೈಕೆ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಮಾ. 10 ರ ಸಚಿವ ಸಂಪುಟ ಸಭೆಯಲ್ಲಿ ಎಚ್‌.ಕೆ.ಪಾಟೀಲ್‌, ಜಯಚಂದ್ರ ಸೇರಿ ದಂತೆ ಹಿರಿಯ ಸಚಿವರು ವರದಿಯ ಬಗ್ಗೆ ಮಾಹಿತಿ ಇಲ್ಲ ಎಂದು ವಿರೋಧ ವ್ಯಕ್ತಪಡಿಸಿದ್ದರು ಎನ್ನಲಾಗಿತ್ತು. ಆದರೆ, ಇಂಧನ ಸಚಿವ ಡಿ.ಕೆ. ಶಿವಕುಮಾರ್‌ ಮಾತ್ರ ಹೇಗೂ ಹೆಜ್ಜೆ ಇಟ್ಟಾಗಿದೆ, ಕೇಂದ್ರ ಸರ್ಕಾ ರಕ್ಕೆ ಶಿಫಾ ರಸು ಮಾಡಿ ಎಂದು ಲಿಂಗಾಯತ ಧರ್ಮದ ಪರವಾಗಿಯೇ ಸಲಹೆ ನೀಡಿದ್ದಾರೆ
ಎನ್ನಲಾಗಿದೆ.

ಲಿಂಗಾಯತ ಸಮುದಾಯಕ್ಕೆ ರಾಜ್ಯ ಸರ್ಕಾರವೇ ಅಲ್ಪ ಸಂಖ್ಯಾತರ ಮಾನ್ಯತೆ ನೀಡಬಹುದೆಂದು ನ್ಯಾ. ನಾಗಮೋಹನ್‌ ದಾಸ್‌ ನೇತೃತ್ವದ ತಜ್ಞರ ಸಮಿತಿ ವರದಿಯಲ್ಲಿ ಉಲ್ಲೇಖೀಸಿದೆ. ರಾಜ್ಯ ಸರ್ಕಾರ ಅಲ್ಪ ಸಂಖ್ಯಾತರ ಮಾನ್ಯತೆ ನೀಡದೇ ನೇರವಾಗಿ ಕೇಂದ್ರ
ಸರ್ಕಾರಕ್ಕೆ ಶಿಫಾರಸ್ಸು ಮಾಡಿದರೇ ಅವರೇ ಅಲ್ಪ ಸಂಖ್ಯಾತರ ಮಾನ್ಯತೆ ನೀಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇದೆ ಎಂದು ವಾಪಸ್‌ ಕಳುಹಿಸುವ ಸಾಧ್ಯತೆ ಇದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಮುಸ್ಲಿಮರ ವಿರೋಧ?: ಈ ನಡುವೆ ಲಿಂಗಾಯತರಿಗೆ ರಾಜ್ಯ ಸರ್ಕಾರವೇ ಅಲ್ಪ ಸಂಖ್ಯಾತರ ಮಾನ್ಯತೆ ನೀಡಿದರೆ, ಮುಸ್ಲಿಂ ಸಮುದಾಯದ ವಿರೋಧ ಕಟ್ಟಿಕೊಳ್ಳಬೇಕಾಗುತ್ತದೆ ಎಂಬ ಆತಂಕವನ್ನೂ ಕೆಲವು ಸಚಿವರು ವ್ಯಕ್ತಪಡಿಸಿದ್ದಾರೆ ಎನ್ನಲಾಗುತ್ತಿದೆ. ಲಿಂಗಾಯತ ಸಮುದಾಯಕ್ಕೆ ಅಲ್ಪ ಸಂಖ್ಯಾತರ ಮಾನ್ಯತೆ ದೊರೆತರೆ ರಾಜ್ಯದಲ್ಲಿ ಅಲ್ಪ ಸಂಖ್ಯಾತ ಸಮುದಾಯಗಳಿಗೆ ಸಿಗುವ ಮೀಸಲಾತಿ ಕೈ ತಪ್ಪುವ ಸಾಧ್ಯತೆ ಇದೆ ಎಂಬ ಆತಂಕವನ್ನು ಅಲ್ಪ ಸಂಖ್ಯಾತ ಆಯೋಗವೇ ಸರ್ಕಾರಕ್ಕೆ ಆಕ್ಷೇಪ ವ್ಯಕ್ತಪಡಿಸಿ ವರದಿ ಸಲ್ಲಿಸಿದೆ.

Advertisement

ಸಂಪುಟ ಸಭೆಯಲ್ಲಿ ಅಲ್ಪ ಸಂಖ್ಯಾತ ಸಚಿವರ ನಿಲುವೂ ಕೂಡ ಮಹತ್ವದ್ದಾಗಿದ್ದು, ಅವರೂ ಸಭೆಯಲ್ಲಿ ಆತಂಕ ವ್ಯಕಪಡಿಸಿದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಇಕ್ಕಟ್ಟಿನಲ್ಲಿ ಸಿಲುಕುವಂತಾಗುತ್ತದೆ. ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್‌ ಪರವಾಗಿರುವ ಅಲ್ಪ ಸಂಖ್ಯಾತ ಸಮುದಾಯವನ್ನು ಎದುರು ಹಾಕಿಕೊಂಡು ಲಿಂಗಾಯತ ಸಮುದಾಯಕ್ಕೆ ಅಲ್ಪ ಸಂಖ್ಯಾತರ ಮಾನ್ಯತೆಗೆ ಮುಖ್ಯಮಂತ್ರಿ
ಸಿದ್ದರಾಮಯ್ಯ ತೀರ್ಮಾನ ಕೈಗೊಳ್ಳುತ್ತಾರಾ ಎಂಬ ಕುತೂಹಲ ಮೂಡಿದೆ.

Advertisement

Udayavani is now on Telegram. Click here to join our channel and stay updated with the latest news.

Next