Advertisement

ಕಾನೂನು ಸಲಹಾ ಕೇಂದ್ರ ಆರಂಭ

04:32 PM Feb 21, 2020 | Suhan S |

ಹಾವೇರಿ: ಸಣ್ಣಪುಟ್ಟ ಸಮಸ್ಯೆಗಳಿಗೆ ನ್ಯಾಯಾಲಯಕ್ಕೆ ಬರುವ ಮೊದಲು ಉಚಿತ ಕಾನೂನು ಸಲಹಾ ಕೇಂದ್ರದಿಂದ ಪರಿಹಾರ ಪಡೆದು ಕೊಳ್ಳಬಹುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಎಸ್‌.ಎಚ್‌. ರೇಣುಕಾದೇವಿ ಹೇಳಿದರು.

Advertisement

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಶನಿವಾರ ನಗರ ಪೊಲೀಸ್‌ ಠಾಣೆಯಲ್ಲಿ ಉಚಿತ ಕಾನೂನು ಸಲಹಾ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು. ದಸ್ತಗಿರಿಯಾದ ಆಪಾದಿತರಿಗೆ ಕಾನೂನು ಸಲಹೆ ಮತ್ತು ನೆರವು ಪಡೆಯಲು ಉಚಿತ ಕಾನೂನು ಸಲಹಾ ಕೇಂದ್ರದಿಂದ ಅನುಕೂಲವಾಗಲಿದೆ ಹಾಗೂ ಪೊಲೀಸ್‌ ಠಾಣೆಗಳಿಗೆ ಬರುವ ಸಾರ್ವಜನಿಕರು ಕಾನೂನು ನೆರವು ಸಹಾಯ ಪಡೆಯಬಹುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್‌ ನ್ಯಾಯಾ ಧೀಶೆ ಕೆ.ಶ್ರೀವಿದ್ಯಾ, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಕೆ.ಸಿ. ಪಾವಲಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿ  ಕಾರದ ಪೆನಲ್‌ ವಕೀಲರಾದ ಎಂ.ಎಚ್‌. ವಾಲಿಕಾರ, ಎಸ್‌.ಪಿ.ದೇವಸೂರ ಹಾಗೂ ಪೊಲೀಸ್‌ ಸಿಬ್ಬಂದಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next