Advertisement

ಮುಚ್ಚಳಿಕೆ ಪತ್ರ ಕೊಟ್ಟು ಕಾರ್ಖಾನೆ ಆರಂಭಿಸಿ

06:40 AM Nov 23, 2018 | |

ಬಾಗಲಕೋಟೆ: ಜಿಲ್ಲೆಯ ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಮಾಲಿಕರ ಮಧ್ಯೆ ನಡೆಯುತ್ತಿರುವ ಸಂಘರ್ಷಕ್ಕೆ ಅಂತ್ಯ ಹಾಡಲು ಜಿಲ್ಲಾಧಿಕಾರಿ ಮಧ್ಯಪ್ರವೇಶ ಮಾಡಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿ ನಿರ್ದೇಶನದ ಮೇರೆಗೆ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳಿಗೆ ಖಡಕ್‌ ಆದೇಶ ಜಾರಿ ಮಾಡಿದ್ದಾರೆ.

Advertisement

ಜಿಲ್ಲೆಯ ಎಲ್ಲ ಸಕ್ಕರೆ ಕಾರ್ಖಾನೆಯವರು ಈಗಾಗಲೇ 2017-18ರ ಹಂಗಾಮು ಪ್ರಾರಂಭಿಸುವ ಮುಂಚೆ ರೈತರಿಗೆ ತಾವು ಘೋಷಣೆ ಮಾಡಿದಂತೆ 2017-18ರ ಅವಧಿಯ ಹಂಗಾಮಿನ ಕೊನೆಯವರೆಗೂ ಪ್ರತಿ ರೈತರಿಗೆ ಪ್ರತಿ ಟನ್‌ ಕಬ್ಬಿಗೆ 2500 ರೂ. ನಿಗದಿತ ಕಾಲಮಿತಿಯೊಳಗೆ ಪಾವತಿಸಬೇಕು. ಜಿಲ್ಲೆಯ ಎಲ್ಲ ಕಾರ್ಖಾನೆ ಮಾಲಿಕರು, ಜಿಲ್ಲಾಧಿಕಾರಿಗಳ ಕಚೇರಿಯನ್ನು ತಕ್ಷಣ ಸಂಪರ್ಕಿಸಿ, ಘೋಷಿಸಿಕೊಂಡ ಮೊತ್ತವನ್ನು ಕಾಲಮಿತಿಯೊಳಗೆ ಪಾವತಿಸಲಾಗುವುದೆಂದು ಮುಚ್ಚಳಿಕೆ ಪತ್ರ ನೀಡಬೇಕು. ನಂತರವೇ ಈ ವರ್ಷದ (2018-19) ಹಂಗಾಮಿಗೆ ಕಬ್ಬು ನುರಿಸುವ ಕಾರ್ಯ ಪ್ರಾರಂಭಿಸಬೇಕು. ನ.20ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಜಿ.ಶಾಂತಾರಾಂ ಆದೇಶದಲ್ಲಿ ತಿಳಿಸಿದ್ದಾರೆ.
 

Advertisement

Udayavani is now on Telegram. Click here to join our channel and stay updated with the latest news.

Next