Advertisement

ಉದ್ಯೋಗ ವಾಹಿನಿ ಜಾಗೃತಿ ರಥಕ್ಕೆ ಚಾಲನೆ

10:58 AM Jun 12, 2019 | Team Udayavani |

ಹಾವೇರಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಮಾಹಿತಿ ಶಿಕ್ಷಣ ಮತ್ತು ಸಂವಹನ ಚಟುವಟಿಕೆಯಡಿ ಉದ್ಯೋಗ ವಾಹಿನಿ ಜಾಗೃತಿ ರಥ ಸಂಚಾರಕ್ಕೆ ಶಾಸಕ ನೆಹರು ಓಲೇಕಾರ ಚಾಲನೆ ನೀಡಿದರು.

Advertisement

ನಗರದ ತಾಪಂ ಕಚೇರಿ ಆವರಣದಲ್ಲಿ ಉದ್ಯೋಗ ವಾಹಿನಿ ಜಾಗೃತಿ ರಥ ವಾಹನ ಸಂಚಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನರೇಗಾ ಯೋಜನೆಯ ಮಾಹಿತಿಯನ್ನು ನೀಡಲು ಈ ವಾಹನವು ಆರು ದಿನ ತಾಲೂಕಿನ ಎಲ್ಲ ಗ್ರಾಪಂಗಳಲ್ಲಿ ಸಂಚಾರ ಮಾಡಲಿದೆ ಎಂದರು. ವಾಹನವು ಗ್ರಾಮಗಳ ಭೇಟಿ ಸಮಯದಲ್ಲಿ ಜನರಿಗೆ ನರೇಗಾ ಯೋಜನೆ ಸಂಪೂರ್ಣ ಮಾಹಿತಿ ನೀಡುವುದು, ಕೂಲಿಕಾರರ ಕೂಲಿ ಬೇಡಿಕೆ, ಹೊಸ ಉದ್ಯೋಗ ಚೀಟಿ ಬೇಡಿಕೆ ಮತ್ತು ವೈಯಕ್ತಿಕ ಕಾಮಗಾರಿಗಳ ಬೇಡಿಕೆಯ ಮಾಹಿತಿಯನ್ನು ತಿಳಿಸಲಾಗುವುದು ಎಂದರು. ತಾಪಂ ಇಒ ಅನ್ನಪೂರ್ಣ ಮುದಕಮ್ಮನವರ, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಬಸವರಾಜ ಬರೇಗಾರ, ನರೇಗಾ ಸಹಾಯಕ ನಿರ್ದೇಶಕ ಟಿ.ಆರ್‌. ಮಲ್ಲಾಡದ, ಮಾಹಿತಿ ಶಿಕ್ಷಣ ಸಂಯೋಜನಾಧಿಕಾರಿ ಜಿ.ಎಸ್‌. ಬೆನ್ನೂರ, ಕೆ.ಸಿ. ಕೋರಿ ಸೇರಿದಂತೆ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next