Advertisement

ಸಮುದಾಯ ಭವನ ಕಾಮಗಾರಿಗೆ ಚಾಲನೆ

10:07 AM Sep 08, 2019 | Team Udayavani |

ಬೈಲಹೊಂಗಲ: ಯಾರು ಎಷ್ಟೇ ಆರೋಪಗಳನ್ನು ಮಾಡಿದರೂ ತಲೆಕೆಡಿಸಿಕೊಳ್ಳದೆ ರಾಜ್ಯ ಬಿಜೆಪಿ ಸರಕಾರ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡುತ್ತಿದೆ. ಎಲ್ಲ ವರ್ಗದವರ ಸರ್ವಾಂಗೀಣ ಅಭಿವೃದ್ಧಿಯೇ ಸಿಎಂ ಯಡಿಯೂರಪ್ಪನವರ ಕನಸಾಗಿದೆ ಎಂದು ಮಾಜಿ ಶಾಸಕ, ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಡಾ| ವಿಶ್ವನಾಥ ಪಾಟೀಲ ಹೇಳಿದರು.

Advertisement

ತಾಲೂಕಿನ ನನಗುಂಡಿಕೊಪ್ಪ ಗ್ರಾಮದ ಶಿವಾನಂದ ಮಠದ ಬಳಿ ಸಮುದಾಯ ಭವನಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಕೇಂದ್ರ ಸಚಿವ ಸುರೇಶ ಅಂಗಡಿ ಅವರ ಈ ಅವಧಿಯಲ್ಲಿ ಅಂದಾಜು 5 ಲಕ್ಷ ರೂ.ಗಳ ಅನುದಾನದಲ್ಲಿ ಈ ಸುಮುದಾಯ ಭವನ ನಿರ್ಮಿಸಲಾಗುತ್ತಿದೆ ಎಂದರು. ಬಿಜೆಪಿ ರಾಜ್ಯ ರೈತ ಮೋರ್ಚಾ ಕಾರ್ಯಕಾರಿಣಿ ಸದಸ್ಯ ನಿಂಗಪ್ಪ ಚೌಡಣ್ಣವರ ಮಾತನಾಡಿ, ವಿಧಾನ ಪರಿಷತ್‌ ಸದಸ್ಯ ಮಹಾಂತೇಶ ಕವಟಗಿಮಠ ಅವರು ಕೂಡ ಗ್ರಾಮಕ್ಕೆ 5 ಲಕ್ಷ ರೂ.ಗಳ ಅನುದಾನ ನೀಡಿದ್ದಾರೆ. ಅದರ ಕಾಮಗಾರಿಯನ್ನು ಶೀಘ್ರ ಪ್ರಾರಂಭಿಸಲಾಗುವುದು ಎಂದರು. ಗ್ರಾಪಂ ಸದಸ್ಯ ಮಹೇಶ ಯಡವಟ್ಟಿ, ಮುಖಂಡರಾದ ಅರ್ಜುನಗೌಡ ಪಾಟೀಲ, ಈರನಗೌಡ ಪಾಟೀಲ, ಮಹಾಂತೇಶ ಅಸುಂಡಿ, ಉದಯ ಕೊಟಬಾಗಿ, ಮುರಿಗೆಪ್ಪ ಅಡಕಿ, ಮುತ್ತು ಚುಳಕಿಮಠ, ವಿಠuಲ ಅಡಕಿ, ವಿರುಪಾಕ್ಷಿ ಆರೇರ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next