Advertisement

ಸ್ವಚ್ಛ ಮೇವ ಜಯತೆ: ಜನ ಜಾಗೃತಿ ರಥಕ್ಕೆ ಚಾಲನೆ

02:46 PM Jun 08, 2019 | Suhan S |

ಗದಗ: ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆ ವಾತಾವರಣ ನಿರ್ಮಿಸಿ, ವೈಜ್ಞಾನಿಕವಾಗಿ ತ್ಯಾಜ್ಯ ವಿಲೇವಾರಿ ಮತ್ತು ನಿರ್ವಹಣೆ ಕುರಿತು ಜನ ಜಾಗೃತಿ ಮೂಡಿಸುವ ಸ್ವಚ್ಛ ಮೇವ ಜಯತೆ ಆಂದೋಲನದ ಜಾಗೃತಿ ರಥಕ್ಕೆ ಇಲ್ಲಿನ ಜಿಲ್ಲಾಡಳಿತ ಭವನದ ಆವರಣದಲ್ಲಿ ಶುಕ್ರವಾರ ಜಿ.ಪಂ. ಅಧ್ಯಕ್ಷ ಎಸ್‌.ಪಿ. ಬಳಿಗಾರ ಚಾಲನೆ ನೀಡಿದರು.

Advertisement

ಬಳಿಕ ಮಾತನಾಡಿದ ಜಿ.ಪಂ. ಅಧ್ಯಕ್ಷ ಎಸ್‌.ಪಿ. ಬಳಿಗಾರ, ಪ್ರತಿಯೊಂದು ಗ್ರಾಮಗಳಲ್ಲಿ ಘನ ಮತ್ತು ದ್ರವ ತ್ಯಾಜ್ಯ ವಿಲೇವಾರಿ ಹಾಗೂ ನಿರ್ವಹಣೆ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಈ ಆಂದೋಲನದ ಮುಖ್ಯ ಉದ್ದೇಶ. ವೈಯಕ್ತಿಕ, ಗೃಹ ಶೌಚಾಲಯ, ಸಮುದಾಯ ಶೌಚಾಲಯಗಳ ಬಳಕೆಯಿಂದಾಗುವ ಪ್ರಯೋಜನೆ ಹಾಗೂ ಜಲ ಸಂರಕ್ಷಣೆ, ನೀರಿನ ಮೂಲಗಳ ಪುನಶ್ಚೇತನ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲಿ ಸ್ವಚ್ಛ ಮೇವ ಜಯತೆ ಆಂದೋಲನ ಹಮ್ಮಿಕೊಳ್ಳಲಾಗಿದೆ. ಗ್ರಾಮೀಣ ಜನರು ಇದರ ಸದುಪಯೋಗ ಪಡೆದುಕೊಂಡು, ತಮ್ಮ ಗ್ರಾಮಗಳಲ್ಲಿ ಸ್ವಚ್ಛ ವಾತಾವರಣ ನಿರ್ಮಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಜಿ.ಪಂ. ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಹನುಮಂತಪ್ಪ ಪೂಜಾರ, ಜಿ.ಪಂ. ಸದಸ್ಯರಾದ ವಾಸಣ್ಣ ಕುರಡಗಿ, ಮಂಜುಳಾ ಹುಲ್ಲಣ್ಣವರ, ರೂಪಾ ಅಂಗಡಿ, ಜಿ.ಪಂ. ಸಿ.ಇ.ಒ ಮಂಜುನಾಥ ಚವ್ಹಾಣ, ಜಿ.ಪಂ. ಉಪಕಾರ್ಯದರ್ಶಿ ಕೆ. ಪ್ರಾಣೇಶರಾವ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ವಿರೂಪಾಕ್ಷ ರೆಡ್ಡಿ ಮಾದಿನೂರ, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next