Advertisement

ಮುಂದಿನ ತಿಂಗಳು 21ರಿಂದ 30ರವರೆಗೆ ನಡೆಯಲಿದೆ ರಾಜ್ಯದ ಮುಂಗಾರು ಅಧಿವೇಶನ

03:18 PM Aug 20, 2020 | keerthan |

ಬೆಂಗಳೂರು: ರಾಜ್ಯದ ಮುಂಗಾರು ಅಧಿವೇಶನ ಸಪ್ಟೆಂಬರ್ 21ರಿಂದ 30ರವರೆಗೆ ನಡೆಯಲಿದೆ ಎಂದು ವರದಿಯಾಗಿದೆ.

Advertisement

ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ವಿಧಾನ ಮಂಡಲ ಅಧಿವೇಶನ ನಡೆಸುವ ಬಗ್ಗೆ ಚರ್ಚೆ ನಡೆಸಲಾಗಿದೆ. ಈ ವೇಳೆ ಸಪ್ಟೆಂಬರ್ 21ರಿಂದ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ ಎನ್ನಲಾಗಿದೆ.

ಕೋವಿಡ್ ಕಾರಣದಿಂದ ಬೇಸಿಗೆ ಅಧಿವೇಶನವನ್ನು ಸರ್ಕಾರ ಮುಂದೂಡಿತ್ತು. ಈ ಸಮಯದಲ್ಲಿ ಎಪಿಎಂಸಿ ಕಾಯ್ದೆ ಮತ್ತು ಭೂ ಸುಧಾರಣಾ ಕಾಯ್ದೆಗೆ ಸುಗ್ರಿವಾಜ್ಞೆ ಮೂಲಕ ಸರ್ಕಾರ ಅಂಗೀಕಾರ ಪಡೆದಿತ್ತು. ಇದು ವಿಪಕ್ಷಗಳ ವಿರೋಧಕ್ಕೂ ಕಾರಣವಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next