Advertisement

ಡಿಸೆಂಬರ್‌ 5ಕ್ಕೆ ರಾಜ್ಯ ಬಂದ್‌

06:36 AM Nov 21, 2020 | mahesh |

ಬೆಂಗಳೂರು: ಸರಕಾರ ತೆಗೆದು ಕೊಂಡಿರುವ ಮರಾಠ ಸಮುದಾಯ ನಿಗಮ ಸ್ಥಾಪನೆ ನಿರ್ಧಾರ ವಿರೋಧಿಸಿ ಕನ್ನಡ ಪರ ಸಂಘನೆಗಳು ಡಿ. 5ರಂದು “ಕರ್ನಾಟಕ ಬಂದ್‌’ಗೆ ಕರೆ ನೀಡಿವೆ.

Advertisement

ಕನ್ನಡ ಚಳವಳಿ ವಾಟಾಳ್‌ ಪಕ್ಷದ ನಾಯಕ ವಾಟಾಳ್‌ ನಾಗರಾಜ್‌ ನೇತೃತ್ವದಲ್ಲಿ ಶುಕ್ರವಾರ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಸರಕಾರದ ನಿಲುವಿನ ಬಗ್ಗೆ ತೀವ್ರ ಅತೃಪ್ತಿ ವ್ಯಕ್ತಪಡಿಸಲಾಯಿತು. ಬಳಿಕ ಮಾತನಾಡಿದ ವಾಟಾಳ್‌, ಡಿ. 5ರಂದು ಬೆಳಗ್ಗೆ 6ರಿಂದ ಸಂಜೆ 6ರ ವರೆಗೆ ಅಖಂಡ ಕರ್ನಾಟಕ ಸಂಪೂರ್ಣ ಬಂದ್‌ ಆಗಲಿದೆ. ಎಲ್ಲರೂ ಸ್ವಯಂ ಪ್ರೇರಿತರಾಗಿ ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಆ ದಿನ ಟೌನ್‌ ಹಾಲ್‌ನಿಂದ ಫ್ರೀಡಂ ಪಾರ್ಕ್‌ವರೆಗೆ ಮೆರವಣಿಗೆ ನಡೆಸಲಾಗುತ್ತದೆ. 250ಕ್ಕೂ ಅಧಿಕ ಕನ್ನಡಪರ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿವೆ. ಹೆದ್ದಾರಿ ತಡೆ ಕೂಡ ನಡೆಯಲಿದೆ ಎಂದರು.

ಮರಾಠ ಸಮುದಾಯ ನಿಗಮ ಸ್ಥಾಪನೆ ನಿರ್ಧಾರದಿಂದ ಸರಕಾರ ಕೂಡಲೇ ಹಿಂದೆ ಸರಿಯ ಬೇಕು. ಬೆಳಗಾವಿ, ಹುಬ್ಬಳ್ಳಿ, ಧಾರವಾಡ, ಮೈಸೂರು, ಬೀದರ್‌, ಮೈಸೂರು ಸಹಿತ ಹಲವು ಕಡೆಗಳಲ್ಲಿ ಸಭೆ ನಡೆಸಿ ಬಂದ್‌ಗೆ ಬೆಂಬಲ ಕೋರಲಾಗುವುದು. ಹೋರಾಟ ಗಾರರಿಗೆ ತೊಂದರೆ ನೀಡಿದರೆ ಸರಕಾರ ಗಂಭೀರ ಪರಿಸ್ಥಿತಿ ಎದುರಿಸಬೇಕಾದೀತು ಎಂದು ವಾಟಾಳ್‌ ಎಚ್ಚರಿಕೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next