Advertisement

ಉಚಿತ ಪದವಿಶಿಕ್ಷಣ, ಬಸ್ ಪಾಸ್, ರೈತನಿಧಿ ವಿಸ್ತರಣೆ; ಶಿಕ್ಷಣ ಕ್ಷೇತ್ರಕ್ಕೆ ಬಜೆಟ್ ನಲ್ಲೇನಿದೆ

11:09 AM Feb 17, 2023 | keerthan |

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2023-24ರ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದು, ಶಿಕ್ಷಣ ಕ್ಷೇತ್ರಕ್ಕೆ ಭರ್ಜರಿ ಕೊಡುಗೆಗಳನ್ನು ಘೋಷಿಸಿದ್ದಾರೆ.

Advertisement

ಶಿಕ್ಷಣ ಕ್ಷೇತ್ರಕ್ಕೆ ಸಿಕ್ಕಿದ್ದೇನು?

ರೈತರ ಮಕ್ಕಳಿಗೆ ಮೀಸಲಾಗಿದ್ದ ರೈತ ವಿದ್ಯಾನಿಧಿಯನ್ನು ಮೀನುಗಾರರು ಮತ್ತು ನೇಕಾರರಿಗೂ ವಿಸ್ತರಿಸಲಾಗಿದೆ. ಮೂರು ಲಕ್ಷ ವಿದ್ಯಾರ್ಥಿಗಳಿಗೆ 141 ಕೋಟಿ ರೂಪಾಯಿ ಅನುದಾನ ನೀಡಲಾಗುವುದು.

ಶಾಲಾ ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ನೀಡಲಾಗುವುದು. ಇದಕ್ಕಾಗಿ 350 ಕೋಟಿ ರೂ ವೆಚ್ಚ ಮಾಡಲಾಗುವುದು. ಮಕ್ಕಳ ಬಸ್ ಯೋಜನೆ ಆರಂಭ

ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ ಆರಂಭ ಮಾಡಲಾಗುವುದು. ಈ ಮೂಲಕ ಸರ್ಕಾರಿ ಪದವಿ ಕಾಲೇಜಿನಲ್ಲಿ ಶುಲ್ಕ ವಿನಾಯತಿ ನೀಡಲಾಗುವುದು. ಉಚಿತ ಉನ್ನತ ಶಿಕ್ಷಣ ಯೋಜನೆ ಜಾರಿ ಮಾಡಲಾಗುವುದು. ಇದರಿಂದ 8 ಲಕ್ಷ ವಿದ್ಯಾರ್ಥಿಗಳಿಗೆ ಲಾಭವಾಗಲಿದೆ.

Advertisement

ಇದನ್ನೂ ಓದಿ:Karnataka Budget 2023:ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ,ಸಿರಿಧಾನ್ಯಕ್ಕೆ ಪ್ರೋತ್ಸಾಹ ಧನ

9556 ಶಾಲಾ ಕೊಠಡಿ ನಿರ್ಮಾಣ ಮಾಡಲಾಗುವುದು,  ಎಲ್ಲಾ ವಿವಿಗಳಲ್ಲಿ ಕನ್ನಡ ಪರೀಕ್ಷೆಗೆ ಕ್ರಮ ಕೈಗೊಳ್ಳಲಾಗುವುದು. 47 ವಸತಿ ಶಾಲೆಗಳ ದುರಸ್ಥಿ ಮತ್ತು ಸ್ಮಾರ್ಟ್ ಕ್ಲಾಸ್,  30 ಕಸ್ತೂರ್ ಬಾ ಗಾಂಧಿ ವಸತಿ ಶಾಲೆಗಳನ್ನು ಹೈಟೆಕ್ ಗೇರಿಸಲಾಗವುದು.

ಸೃಷ್ಟಿ ಟಿಂಕರಿಂಗ್ ಪ್ರಯೋಗಾಲಯಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು.

 

Advertisement

Udayavani is now on Telegram. Click here to join our channel and stay updated with the latest news.

Next