Advertisement

ರಾಜ್ಯ ಬಜೆಟ್; ಶಂಕರ್ ನಾಗ್ ಹೆಸರಿನಲ್ಲಿ ಆಟೋ ರಿಕ್ಷಾ ನಿಲ್ದಾಣಗಳು

03:13 PM Feb 17, 2023 | Team Udayavani |

ಬೆಂಗಳೂರು : ಸಿಎಂ ಬಸವರಾಜ್ ಬೊಮ್ಮಾಯಿ ಅವರು ಶುಕ್ರವಾರ ಮಂಡಿಸಿರುವ ಬಜೆಟ್ ನಲ್ಲಿ ಖ್ಯಾತ ನಟ ಆಟೋ ರಾಜ ಖ್ಯಾತಿಯ ದಿವಂಗತ ಶಂಕರ್ ನಾಗ್ ಅವರ ಹೆಸರಿನಲ್ಲಿ ಟ್ಯಾಕ್ಸಿ ಮತ್ತು ಆಟೋ ರಿಕ್ಷಾ ನಿಲ್ದಾಣಗಳನ್ನು ನಿರ್ಮಿಸುವ ಕುರಿತು ಘೋಷಿಸಲಾಗಿದೆ.

Advertisement

ನಗರ ಹಾಗೂ ಪಟ್ಟಣಗಳಲ್ಲಿ ಖಾಲಿ ಇರುವ ಜಾಗಗಳನ್ನು ಗುರುತಿಸಿ ಶಂಕರ್ ನಾಗ್ ಅವರ ಹೆಸರಿನಲ್ಲಿ ಟ್ಯಾಕ್ಸಿ ಮತ್ತು ಆಟೋ ನಿಲ್ದಾಣಗಳನ್ನು ನಿರ್ಮಾಣ ಮಾಡಲಾಗುತ್ತದೆ.

88 ಲಕ್ಷ ಜನರಿಗೆ ಉದ್ಯೋಗ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ರಾಜ್ಯ ಕಳೆದ ಐದು ವರ್ಷಗಳಲ್ಲಿ 23 ಲಕ್ಷ ರೂ ವೈಯಕ್ತಿಕ ಕಾಮಗಾರಿಗಳನ್ನು ಅನುಷ್ಠಾನಗೊಳಿಸಿ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. ಈ ಯೋಜನೆಯಡಿ ತೋಟಗಾರಿಕೆ, ಅರಣ್ಯೀಕರಣ, ರೇಷ್ಮೆ, ಕೃಷಿ ಅರಣ್ಯೀಕರಣ, ಶಾಲೆಗಳ ಕಾಂಪೌಂಡ್ , ಆಟದ ಮೈದಾನಗಳು, ಶೌಚಾಲಯಗಳು, ಅಂಗನವಾಡಿ ಕಟ್ಟಡಗಳು, ಜಾನುವಾರುಗಳ ಶೆಡ್, ಸಾಂಪ್ರದಾಯಿಕ ಜಲಮೂಲಗಳ ಪುನರುಜ್ಜೀವನ, ರಸ್ತೆ ಕಾಮಗಾರಿಗಳು, ರಸ್ತೆಬದಿ ನೆಡುತೋಪುಗಳ ಯೋಜನೆಯಲ್ಲಿ 2023-24 ನೇ ಸಾಲಿನಲ್ಲಿ 1,800 ಕೋಟಿ ರೂ ವೆಚ್ಚದಲ್ಲಿ 88 ಲಕ್ಷ ಜನರಿಗೆ ಉದ್ಯೋಗ ಕಲ್ಪಿಸಲು ಉದ್ದೇಶಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next