Advertisement

ಚಿತ್ರನಗರಿ ಬಗ್ಗೆ ಸೊಲ್ಲೆತ್ತದ ಬಜೆಟ್‌

12:27 PM Feb 18, 2023 | Team Udayavani |

ಮೈಸೂರು: ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಎರಡನೇ ಹಾಗೂ ಬಿಜೆಪಿ ಸರ್ಕಾರದ ಕೊನೆಯ ಬಜೆಟ್‌ನಲ್ಲಿ ಮೈಸೂರಿಗೆ ನಿರೀಕ್ಷಿತ ಮಟ್ಟದಲ್ಲಿ ಸ್ಪಂದನೆ ದೊರೆಯದಿದ್ದರೂ, ಕೆಲ ಅನಿರೀಕ್ಷಿತ ಕೊಡುಗೆ ನೀಡುವ ಮೂಲಕ ಮೈಸೂರಿಗೆ ಸಿಹಿ ಸುದ್ದಿ ನೀಡಿದ್ದಾರೆ.

Advertisement

ಚುನಾವಣೆ ವರ್ಷದ ಬಜೆಟ್‌ ಆಗಿದ್ದರೂ ಜಿಲ್ಲೆಗೆ ಹೇಳಿಕೊಳ್ಳುವಂತಹ ಯೋಜನೆ ನೀಡದಿದ್ದರೂ, ಕಳೆದ ವರ್ಷದಂತೆ ಈ ಬಾರಿಯೂ ನಿರೀಕ್ಷಿತ ಯೋಜನೆಗಳ ಬದಲಿಗೆ ಅನಿರೀಕ್ಷಿತವಾಗಿ ಕೊಡುಗೆ ಮತ್ತು ಯೋಜನೆ ನೀಡಿದೆ.

ಈ ಮೂಲಕ ಮೈಸೂರನ್ನು ಕಡೆಗಣಿಸದೇ ಕೈಗಾರಿಕೆ, ಆರೋಗ್ಯ, ಪ್ರವಾಸೋದ್ಯಮ ಕ್ಷೇತ್ರಗಳ ಅಭಿವೃದ್ಧಿಗೆ ಉತ್ತೇಜನ ನೀಡಲಾಗಿದೆ. ಜತೆಗೆ ಮೈಸೂರು ಜನತೆಯ ಬಹುವರ್ಷಗಳ ಬೇಡಿಕೆಯಾಗಿದ್ದ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಬಜೆಟ್‌ನಲ್ಲಿ ಒತ್ತು ನೀಡಿರುವುದು ಗಮನಾರ್ಹ.

ಪಾರಂಪರಿಕ ಕಟ್ಟಡಗಳ ರಕ್ಷಣೆ: ಪಾರಂಪರಿಕ ನಗರಿ ಎಂದೇ ಹೆಸರಾದ ಮೈಸೂರಿನಲ್ಲಿ ನೂರಕ್ಕೂ ಹೆಚ್ಚು ಪಾರಂಪರಿಕ ಕಟ್ಟಡಗಳಿದ್ದು, ಕುಸಿದು ಬೀಳುವ ಹಂತದಲ್ಲಿವೆ. ಈ ಎಲ್ಲಾ ಕಟ್ಟಡಗಳ ಸಂರಕ್ಷಣೆಗೆ ಸರ್ಕಾರ ಮುಂದಾಗಬೇಕು ಎಂದು ಹಲವು ವರ್ಷಗಳಿಂದ ಜನತೆ ಸರ್ಕಾರಕ್ಕೆ ಆಗ್ರಹಿಸಿದ್ದರು. ಅದರಂತೆ ಸರ್ಕಾರ ಮೈಸೂರಿನ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಕ್ರಮ ವಹಿಸುವ ಕುರಿತು ಪ್ರಸ್ತಾಪ ಮಾಡಿರುವುದು, ಮೈಸೂರಿನ ಹೆಗ್ಗುರುತಾದ ಪಾರಂಪರಿಕ ಕಟ್ಟಡಗಳ ನವೀಕರಣಕ್ಕೆ ಕಾಲ ಕೂಡಿಬರುವಂತಾಗಿದೆ.

ಕಲಾ ಗ್ಯಾಲರಿ: ಜಿಲ್ಲೆಯ ಪ್ರವಾಸೋದ್ಯಮಕ್ಕೆ ಮತ್ತಷ್ಟು ಪುಷ್ಟಿ ನಿಡುವ ಸಲುವಾಗಿ ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗ ಣದ ಬಳಿ ಎರಡೂವರೆ ಎಕರೆ ಜಾಗ ವಿಸ್ತೀರ್ಣದಲ್ಲಿ ಅಂತಾರಾಷ್ಟ್ರೀಯ ಮಟ್ಟದ ರಾಜ್ಯ ವಸ್ತುಸಂಗ್ರಹಾಲಯ ಮತ್ತು ಕಲಾ ಗ್ಯಾಲರಿ ನಿರ್ಮಾಣಕ್ಕೆ 10 ಕೋಟಿ ರೂ. ಘೋಷಿಸಿದೆ.

Advertisement

ವಿಮಾನ ನಿಲ್ದಾಣ ಉನ್ನತೀಕರಣ: ಕಳೆದ ಏಳು ವರ್ಷಗಳಿಂದ ವಿಮಾನ ನಿಲ್ದಾಣ ರನ್ವೇ ವಿಸ್ತರಣೆ ಬೇಡಿಕೆಗೆ ಮನ್ನಣೆ ನೀಡಿ ಕಳೆದ ಆಯವ್ಯಯದಲ್ಲಿ ನಂಜನಗೂಡು ರಸ್ತೆಯಲ್ಲಿರುವ ಮೈಸೂರು ವಿಮಾನ ನಿಲ್ದಾಣದ ರನ್‌ ವೇ ವಿಸ್ತರಿಸಲು ಬಜೆಟ್‌ನಲ್ಲಿ ಘೋಷ ಣೆ ಮಾಡಲಾಗಿತ್ತು. ಭೂ ಸ್ವಾಧೀನ ಸೇರಿ ಅಗತ್ಯವಿರುವ ಸೌಕರ್ಯ ಕಲ್ಪಿಸಲು ಅಂದಾಜು 400 ಕೋಟಿ ರೂ. ಅನುದಾನ ನೀಡುವು ದಾಗಿ ಘೋಷಿಸಿತ್ತು. ಆದರೆ ಭೂ ಸ್ವಾದೀನ ಪ್ರಕ್ರಿಯೆ ವಿಳಂಬವಾಗಿದೆ. ಈ ನಡುವೆ ಸರ್ಕಾರ ಬಜೆಟ್‌ನಲ್ಲಿ ಮೈಸೂರು ವಿಮಾನ ನಿಲ್ದಾಣ ಉನ್ನತೀಕರಣಕ್ಕೆ 320 ಕೋಟಿ ರೂ. ಹಂಚಿಕೆ ಮಾಡಿದೆ.

ನಗರಾಭಿವೃದ್ಧಿಗೆ ಪೂರಕವಾದ ಟೌನ್‌ಶಿಪ್‌: ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಮೈಸೂರು ನಗರದಲ್ಲಿ ತಮ ಕನಸಿನ ಮನೆಯನ್ನು ಹೊಂದುವ ನಿರೀಕ್ಷೆ ಲಕ್ಷಾಂತ ಮಂದಿಯಲ್ಲಿದ್ದು, ಅವರ ಬೇಡಿಕೆಗೆ ಅನುಗುಣವಾಗಿ ಮೈಸೂರಿನಲ್ಲಿ ಸಾರ್ವಜನಿಕ, ಖಾಸಗಿ ಸಹಭಾಗಿತ್ವದಲ್ಲಿ ಇಂಟೆಗ್ರೇಟೆಡ್‌ ಟೌನ್‌ಶಿಪ್‌ ನಿರ್ಮಾಣಕ್ಕೆ ಬಜೆಟ್‌ನಲ್ಲಿ ಹೇಳಲಾಗಿದೆ. ಇತ್ತೀಚೆಗೆ ಮೈಸೂರು ಜಿಲ್ಲೆಯ ಜನರನ್ನು ನಿದ್ದೆಗೆಡಿಸಿದ್ದ ತಿ.ನರಸೀಪುರ ಚಿರತೆ ದಾಳಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಚಿರತೆ ಸೆರೆಗೆ ವಿಶೇಷ ಕಾರ್ಯಪಡೆ ರಚನೆ ಮಾಡಿದ್ದು, ಅದಕ್ಕೆ ಅನುಕೂವಾಗುವ ದೃಷ್ಟಿಯಿಂದ 199 ಮಂದಿ ಸಿಬ್ಬಂದಿ ನೇಮಕಕ್ಕೆ ಬಜೆಟ್‌ನಲ್ಲಿ ಪ್ರಸ್ತಾಪ ಮಾಡಲಾಗಿದೆ.

ಈ ಮೂಲಕ ವನ್ಯಜೀವಿ – ಮಾನವ ಸಂಘರ್ಷ ತಡೆಗೆ ಒತ್ತು ನೀಡಲಾಗಿದೆ. ಹಾಗೆಯೇ ಕೇಂದ್ರ ಸರ್ಕಾದ ಪ್ರಸಾದ್‌ ಯೋಜನೆಯಡಿ ಚಾಮುಂಡಿ ಬೆಟ್ಟದಲ್ಲಿ ದೇಗುಲ ಅಭಿವೃದ್ಧಿ ಮಾಡುವುದು ಹಾಗೂ ಮೈಸೂರಿನಲ್ಲಿರುವ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರ ದಲ್ಲಿ ಶಾಶ್ವತ ಸೌಲಭ್ಯಗಳ ಒದಗಿಸುವ ಬಗ್ಗೆ ಹೇಳಲಾಗಿದೆ.

– ಸತೀಶ್‌ ದೇಪುರ

Advertisement

Udayavani is now on Telegram. Click here to join our channel and stay updated with the latest news.

Next