Advertisement

ಮಾರ್ಚ್ 5ರಂದು ರಾಜ್ಯ ಬಜೆಟ್, ಕೃಷಿಗೆ ಆದ್ಯತೆ; ಸಂಪುಟ ವಿಸ್ತರಣೆ ಶೀಘ್ರ: ಸಿಎಂ ಯಡಿಯೂರಪ್ಪ

09:15 AM Jan 16, 2020 | Mithun PG |

ಶಿವಮೊಗ್ಗ: ಫೆಬ್ರವರಿ ಅಂತ್ಯದೊಳಗೆ ಸಮಗ್ರ ಚರ್ಚೆ ನಡೆಸಿ, ಅಂತಿಮ ಅನುಮೋದನೆ ಪಡೆದು ಮಾರ್ಚ್ ಐದರಂದು ರಾಜ್ಯ ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

Advertisement

ಶಿವಮೊಗ್ಗದಲ್ಲಿ ರಾಜ್ಯದ ಜನತೆಗೆ ಸಂಕ್ರಾಂತಿ ಶುಭಾಶಯ ಕೋರಿ ಮಾತನಾಡಿದ ಅವರು, ಹಣಕಾಸು ಸ್ಥಿತಿಗತಿ ನೋಡಿಕೊಂಡು ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡಲಾಗುವುದು. ಮಾರ್ಚ್ ಐದರಂದು ರಾಜ್ಯ ಬಜೆಟ್ ಮಂಡನೆ ಮಾಡುವುದು ಖಚಿತ . ಈ ಬಾರಿ ಕೃಷಿಗೆ ಹೆಚ್ಚಿನ ಅದ್ಯತೆ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ದಾವೋಸ್ ನಲ್ಲಿ ನಡೆಯಲಿರುವ ಸಮಾವೇಶದಲ್ಲಿ ಮೂರು ದಿನಗಳ ಕಾಲ ಭಾಗವಹಿಸಲು ತೆರಳಲಿದ್ದೇನೆ. ಜನವರಿ 19  ರಂದು ದಾವೋಸ್ ಗೆ ತೆರಳಿ, 23 ಕ್ಕೆ ವಾಪಾಸು ಬರುಲಿದ್ದೇನೆ. ಈ ವೇಳೆ ರಾಜ್ಯದಲ್ಲಿ ಬಂಡವಾಳ ತೊಡಗಿಸಲು ಕೈಗಾರಿಕೋದ್ಯಮಿಗಳೊಂದಿಗೆ ಮಾತುಕತೆ ನಡೆಸಲಾಗುವುದು ಎಂದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಜನವರಿ 18 ರಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಆ ವೇಳೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಿ ಖಾತೆ ಹಂಚಿಕೆ ಮಾಡಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next