Advertisement

ನಾಳೆ ರಾಜ್ಯ ಸಚಿವ ಸಂಪುಟ ವಿಸ್ತರಣೆ

11:49 PM Jun 12, 2019 | Team Udayavani |

ಬೆಂಗಳೂರು: ರಾಜ್ಯ ಸಚಿವ ಸಂಪುಟದ ವಿಸ್ತರಣೆ ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ರಾಜಭವನದ ಗಾಜಿನ ಮನೆಯಲ್ಲಿ ನಡೆಯಲಿದೆ. ಸಚಿವ ಸಂಪುಟಕ್ಕೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಕೋಟಾದಡಿ ತಲಾ ಒಬ್ಬರಂತೆ ಪಕ್ಷೇತರ ಶಾಸಕರಾದ ಆರ್‌.ಶಂಕರ್‌ ಹಾಗೂ ನಾಗೇಶ್‌ ಅವರನ್ನು ಸೇರ್ಪಡೆ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ಜೆಡಿಎಸ್‌ನ ಮತ್ತೂಂದು ಸ್ಥಾನಕ್ಕೆ ಬಿ.ಎಂ.ಫ‌ರೂಕ್‌ ಹೆಸರು ಕೇಳಿ ಬರುತ್ತಿದೆ.

Advertisement

ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಮಂತ್ರಿಮಂಡಲದ ಸದಸ್ಯರಿಗೆ ರಾಜ್ಯಪಾಲ ವಜೂಭಾಯಿ ವಾಲಾ ಅವರು ಅಧಿಕಾರದ ಹಾಗೂ ಗೋಪ್ಯತಾ ಪ್ರಮಾಣ ವಚನ ಬೋಧಿಸಲಿದ್ದಾರೆ ಎಂದು ರಾಜಭವನದ ಪ್ರಕಟಣೆ ತಿಳಿಸಿದೆ. ಸಚಿವ ಸಂಪುಟ ಪುನಾರಚನೆಯಾಗಬೇಕು.

ಹಿಂದಿನ ಕಾಂಗ್ರೆಸ್‌ ಸರ್ಕಾರದಲ್ಲಿ ಸಚಿವರಾಗಿ ಈಗಿನ ಸರ್ಕಾರದಲ್ಲೂ ಸಚಿವರಾಗಿರುವವರನ್ನು ತೆಗೆದು ಹೊಸಬರಿಗೆ ಅವಕಾಶ ನೀಡಬೇಕು ಎಂಬ ಬೇಡಿಕೆ ಕಾಂಗ್ರೆಸ್‌ನಲ್ಲಿ ಇತ್ತಾದರೂ ಸದ್ಯಕ್ಕೆ ಸಂಪುಟ ಪುನಾರಚನೆ ಬದಲು ವಿಸ್ತರಣೆಗಷ್ಟೇ ಸೀಮಿತ ಮಾಡಲು ತೀರ್ಮಾನಿಸಲಾಗಿದೆ. ಹೀಗಾಗಿ, ಸಂಪುಟದಲ್ಲಿ ಖಾಲಿ ಇರುವ ಮೂರು ಅಥವಾ ಎರಡು ಸ್ಥಾನವನ್ನು ಮಾತ್ರ ಭರ್ತಿ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.

ಕೆಸಿವಿ ಆಗಮನ: ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಅವರು ಗುರುವಾರ ನಗರಕ್ಕೆ ಆಗಮಿಸುವ ನಿರೀಕ್ಷೆಯಿದೆ.

Advertisement

Udayavani is now on Telegram. Click here to join our channel and stay updated with the latest news.

Next