Advertisement

ಶಿಕ್ಷಕರ ವರ್ಗಾವಣೆ ಕಾಯ್ದೆಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ

08:08 AM May 15, 2020 | Hari Prasad |

ಬೆಂಗಳೂರು: ಕಳೆದ ವಿಧಾನಸಭಾ ಅಧಿವೇಶನದಲ್ಲಿ ಸದನದಲ್ಲಿ ಅಂಗೀಕಾರಗೊಂಡಿದ್ದ ಶಿಕ್ಷಕರ ವರ್ಗಾವಣೆ ಕಾಯ್ದೆಗೆ ರಾಜ್ಯ ಸಚಿವ ಸಂಪುಟ ಇಂದು ಒಪ್ಪಿಗೆಯನ್ನು ನೀಡಿದೆ.

Advertisement

ಈ ಮೂಲಕ ಬಹುದಿನಗಳಿಂದ ಬಾಕಿಯಾಗಿದ್ದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಸದ್ಯದಲ್ಲೇ ಚಾಲನೆ ದೊರೆಯುವ ನಿರೀಕ್ಷೆ ಇದೆ.

ಇನ್ನು ಇಂದಿನ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ನಗರ ಯೋಜನೆ ಕಾಯ್ದೆಗೆ ಮಾಡಲಾದ ತಿದ್ದುಪಡಿಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ನಿರ್ಧರಿಸಲಾಯಿತು.

ರಾಜ್ಯದಲ್ಲಿ ಹಣ್ಣು ತರಕಾರಿ ಬೆಳೆದ ರೈತರಿಗೆ ಪ್ರತೀ ಹೆಕ್ಟೇರ್ ಗೆ 15 ಸಾವಿರ ರೂಪಾಯಿಗಳ ಪರಿಹಾರ. 1.25 ಲಕ್ಷ ವಿದ್ಯುತ್ ಚಾಲಿತ ಮಗ್ಗದ ಓರ್ವ ಕೂಲಿ ಕಾರ್ಮಿಕನಿಗೆ 2 ಸಾವಿರ ರೂಪಾಯಿ ಪರಿಹಾರ ನೀಡಲು ಸಚಿವ ಸಂಪುಟ ಸಭೆ ತನ್ನ ಒಪ್ಪಿಗೆಯನ್ನು ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next