Advertisement

BJPಯಿಂದ ರಾಜ್ಯದ ಅಭಿವೃದ್ಧಿ: ಸಂಗಣ್ಣ ಕರಡಿ

11:47 PM Apr 22, 2023 | Team Udayavani |

ಕೊಪ್ಪಳ: ರಾಜ್ಯದ ಸಮಗ್ರ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯ. ಕ್ಷೇತ್ರದ ಜನತೆ ಬಿಜೆಪಿಗೆ ಮತ ಹಾಕಿ ಬೆಂಬಲಿಸಬೇಕು ಎಂದು ಸಂಸದ ಕರಡಿ ಸಂಗಣ್ಣ ಅವರು ಮನವಿ ಮಾಡಿದರು.

Advertisement

ಬಿಜೆಪಿ ಅಭ್ಯರ್ಥಿ ಮಂಜುಳಾ ಅಮರೇಶ ಕರಡಿ ಅವರ ಪರ ತಾಲೂಕಿನ ಹುಲಗಿ, ಹಳೆ ಶಿವಪುರ, ಅಗಳಕೇರಿ ಗ್ರಾಮಗಳಲ್ಲಿ ಪ್ರಚಾರ ನಡೆಸಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಅ ಧಿಕಾರಕ್ಕೆ ಬಂದಾಗಿನಿಂದ ರಾಜ್ಯ ದಲ್ಲಿ ಹಲವಾರು ರಾಷ್ಟ್ರೀಯ ಹೆದ್ದಾರಿಗಳನ್ನು ಅಭಿವೃದ್ಧಿ ಪಡಿಸುವ ಮೂಲಕ ಸರಕು ಸಾಗಣೆಯಲ್ಲಿ ರಾಜ್ಯ ಮುಂಚೂಣಿಯಲ್ಲಿದೆ. ಇದು ಬಿಜೆಪಿ ಸರಕಾರ ದಿಂದ ಸಾಧ್ಯವಾಗಿದೆ. ಕೊಪ್ಪಳ ಲೋಕ ಸಭಾ ಕ್ಷೇತ್ರದಲ್ಲಿ ಕೇಂದ್ರ ಹಾಗೂ ರಾಜ್ಯದ ಸರಕಾರದ ಯೋಜನೆಯನ್ನು ಪರಿಪೂರ್ಣವಾಗಿ ಫಲಾನುಭವಿಗಳಿಗೆ ತಲುಪಿಸಿದೆ. ಉಜ್ವಲ ಯೋಜನೆಯಡಿ ಕ್ಷೇತ್ರದ ಮಹಿಳೆಯರಿಗೆ ಗ್ಯಾಸ್‌ ಸ್ಟವ್‌ ಹಾಗೂ ಸಿಲಿಂಡರ್‌ ನೀಡಲಾಗಿದೆ. ಈ ಮೂಲಕ ಮಹಿಳೆಯರ ಜೀವನಮಟ್ಟ ಸುಧಾರಿಸಲಾಗಿದೆ ಎಂದರು.

ಬಿಜೆಪಿ ಅಭ್ಯರ್ಥಿ ಮಂಜುಳಾ ಅಮರೇಶ ಕರಡಿ ಮಾತನಾಡಿ, ಮಹಿಳೆಯರ ಸಮಸ್ಯೆಗಳನ್ನು ಅರಿತಿರುವ ಏಕೈಕ ಪಕ್ಷ ಬಿಜೆಪಿ. ಪ್ರಧಾನಿ ನರೇಂದ್ರ ಮೋದಿ ಅವರು ಸ್ವತ್ಛ ಭಾರತ ಯೋಜನೆಯಡಿ ಬಯಲು ಶೌಚಾಲಯ ಮುಕ್ತ ರಾಜ್ಯವನ್ನಾಗಿ ಮಾಡಿದ್ದಾರೆ. ಮತದಾರರು ಕೇಂದ್ರ ಹಾಗೂ ರಾಜ್ಯ ಸರಕಾರದ ಯೋಜನೆಗಳನ್ನು ಗಮನಿಸಿ ಬಿಜೆಪಿಗೆ ಮತ ನೀಡಬೇಕು ಎಂದರು.

ಉಡಿ ತುಂಬಿದ ಮಹಿಳೆಯರು
ಅಭ್ಯರ್ಥಿ ಮಂಜುಳಾ ಅಮರೇಶ ಕರಡಿ ಅವರಿಗೆ ಬಂಡಿ ಹರ್ಲಾಪುರ ಜಿ.ಪಂ. ವ್ಯಾಪ್ತಿಯಲ್ಲಿ ಪ್ರಚಾರ ನಡೆಸುವ ವೇಳೆ ಮಹಿಳೆಯರು ಉಡಿ ತುಂಬುವ ಮೂಲಕ ಆಶೀರ್ವಾದ ಮಾಡಿದರು.

ಪಕ್ಷಕ್ಕೆ ಸೇರ್ಪಡೆ
ಬೂದಿಹಾಳದ 50ಕ್ಕೂ ಅಧಿಕ ಯುವಕರು, ಮಹಿಳೆಯರು, ಮುಖಂಡರು ಸಂಸದ ಕರಡಿ ಸಂಗಣ್ಣ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next