Advertisement

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

07:37 PM Apr 30, 2024 | Shreeram Nayak |

ಶಿವಮೊಗ್ಗ:ರಾಜ್ಯ ಸರ್ಕಾರ ದಿವಾಳಿ ಆಗಿದೆ. ಬರ ಪರಿಹಾರ ನೀಡಲು ಹಣ ಇಲ್ಲ. ಅಭಿವೃದ್ಧಿಯೂ ನಿಂತು ಹೋಗಿದೆ. ಇಂತಹ ದುರ್ಬಲ ಸರ್ಕಾರ ನಾನೆಂದೂ ನೋಡಿಲ್ಲ. ವಿಚಿತ್ರವಾದ ಪರಿಸ್ಥಿತಿ ನಿರ್ಮಾಣ ಆಗಿದೆ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ತಿಳಿಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರ ಪರಿಹಾರ ವಿಚಾರವಾಗಿ ಕೇಂದ್ರದ ಕಡೆ ಬೊಟ್ಟು ತೋರಿಸುತ್ತಿದ್ದಾರೆ. ಬರ ಬಂದಿರುವುದು ನಿಜ. ಅಗತ್ಯ ಇದ್ದರೆ ನಾವೂ ಹೋರಾಟ ಮಾಡುತ್ತೇವೆ. ಹಾಸನ ಪೆನ್‌ ಡ್ರೈವ್‌ ವಿಚಾರದ ಬಗ್ಗೆ ಚರ್ಚೆ ಮಾಡಲ್ಲ. ಕಾನೂನು ಅದರ ಅಡಿಯಲ್ಲಿ ಕ್ರಮ ತೆಗೆದುಕೊಳ್ಳುತ್ತದೆ. ರಾಜ್ಯದಲ್ಲಿ 28 ಕ್ಷೇತ್ರದಲ್ಲಿ ಗೆಲ್ಲಲು ಎಲ್ಲ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ. ಒಂದೆರಡು ಕ್ಷೇತ್ರದಲ್ಲಿ ವ್ಯತ್ಯಾಸ ಆದರೂ 25ರಿಂದ 26 ಕ್ಷೇತ್ರದಲ್ಲಿ ಗೆಲ್ಲುತ್ತೇವೆ. ನೀರಿಕ್ಷೆ ಮೀರಿ ಎಲ್ಲಾ ಕಡೆ ಒಳ್ಳೆಯ ವಾತಾವರಣ ನಿರ್ಮಾಣ ಆಗಿದೆ. ದೇಶದಲ್ಲಿ 400 ಸ್ಥಾನ ಗೆಲ್ಲುತ್ತೇವೆ. ಬುಧವಾರದಿಂದ ಮತ್ತೆ ಪ್ರವಾಸ ಕೈಗೊಂಡಿದ್ದೇವೆ. ರಾಘವೇಂದ್ರ ಕೂಡ ಎರಡೂವರೆ ಲಕ್ಷ ಮತಗಳ ಅಂತರದಲ್ಲಿ ಗೆಲ್ಲುತ್ತಾರೆ. ರಾಜ್ಯದಲ್ಲಿ ಕೂಡ ಒಳ್ಳೆಯ ರೀತಿಯ ವಾತಾವರಣ ಇದೆ. ಜೆ.ಪಿ.ನಡ್ಡಾ ನಮಗೆ ಸ್ಫೂ ರ್ತಿ ತುಂಬಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next