Advertisement

Hubli; ಕಟ್ಟರ್ ಇಸ್ಲಾಮಿಕ್ ಮೂಲಭೂತವಾದಿಗಳಿಗೆ ರಾಜ್ಯ ಸರಕಾರ ಸಹಕಾರ: ಪ್ರಹ್ಲಾದ ಜೋಶಿ

01:16 PM Mar 02, 2024 | Team Udayavani |

ಹುಬ್ಬಳ್ಳಿ: ಇತ್ತೀಚಿಗೆ ನಡೆದ ಘಟನೆಗಳಿಂದಾಗಿ ರಾಜ್ಯದ ಜನರ ಬದುಕು ಅಸುರಕ್ಷಿತವಾಗಿದೆ. ಕಟ್ಟರ್ ಇಸ್ಲಾಮಿಕ್ ಮೂಲಭೂತವಾದಿಗಳಿಗೆ ರಾಜ್ಯ ಸರಕಾರ ಸಹಕಾರ ನೀಡುತ್ತಿದೆ. ಈ ಧೋರಣೆಯಿದ್ದರೆ ಕೇಂದ್ರ ಸರಕಾರ ಸಹಕಾರ ನೀಡಲು ಸಾಧ್ಯವೇ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Advertisement

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನಡೆದ ಬಾಂಬ್ ಬ್ಲಾಸ್ಟ್ ಘಟನೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ. ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದವರ ಮೇಲೆ ಯಾವುದೇ ಕ್ರಮ ಇಲ್ಲ. ಎಸ್ಡಿಪಿಐ ಮತ್ತು ಪಿಎಫ್ಐ ಮೇಲಿನ ಕೇಸ್ ವಾಪಸು ಪಡೆದು ಕಾಂಗ್ರೆಸ್ ಸರ್ಕಾರ ಅವರ ಪರವಾಗಿ ಇದೆ ಅಂತ ತೋರಿಸಿದ್ದರು‌. ಇಂತಹ ಕೃತ್ಯಗಳಿಂದಾಗಿ ತಮ್ಮ ಬದಕು ಅಸುರಕ್ಷಿತವಾಗಿದೆ ಎನ್ನುವ ಭಾವನೆ ರಾಜ್ಯದ ಸಾಮಾನ್ಯ ಜನರಲ್ಲಿ ಮೂಡಿಸಿದೆ ಎಂದರು.

ರಾಜ್ಯದಲ್ಲಿ ಇಸ್ಲಾಮಿಕ್ ಮೂಲಭೂತವಾದ ನಡೆಯುತ್ತಿದೆ. ಕಟ್ಟರ್ ಇಸ್ಲಾಮಿಕ್ ಮೂಲಭೂತವಾದಿಗಳಿಗೆ ರಾಜ್ಯ ಸರ್ಕಾರ ಸಹಕಾರ ನೀಡುತ್ತಿದೆ. ಉಗ್ರರಿಗೆ ಕರ್ನಾಟಕ ಸ್ವರ್ಗವಾಗಿದೆ. ಇದಕ್ಕೆ ನೇರವಾಗಿ ಸಿಎಂ ಸಿದ್ದರಾಮಯ್ಯ ಅವರೇ ಕಾರಣ. ಪ್ರಕರಣವನ್ನು ಎನ್ಐಎ ತನಿಖೆಗೆ ನೀಡಲು ನನ್ನ ಆಗ್ರಹವಿದೆ. ರಾಜ್ಯ ಸರಕಾರಕ್ಕೆ ಈ ಧೋರಣೆಯಿದ್ದರೆ ಕೇಂದ್ರ ಸರಕಾರ ಸಹಕಾರ ನೀಡಲು ಸಾಧ್ಯವೆ. ಭಯೋತ್ಪಾದಕತೆ ನಿಲ್ಲಿಸಿದರೆ ಮಾತ್ರ ಸಹಕಾರ ನೀಡುತ್ತೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next