Advertisement

Politics: ಅನ್ನದಾತರ ಹಿತ ಕಾಪಾಡುವಲ್ಲಿ ರಾಜ್ಯ ಸರಕಾರ ವಿಫಲ: ಆರಗ

11:51 PM Sep 29, 2023 | Team Udayavani |

ಶಿವಮೊಗ್ಗ: ರಾಜ್ಯದ ಕಾಂಗ್ರೆಸ್‌ ಸರಕಾರ ರೈತರ ಹಾಗೂ ರಾಜ್ಯದ ಹಿತ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಕಾವೇರಿ ನೀರಿನ ಬಗ್ಗೆ ವಿಚಿತ್ರವಾಗಿ ಆಡುತ್ತಿದೆ. ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನ ಒಕ್ಕೂಟದ ಗುಂಪು ಗೆಲ್ಲಲು ಏನು ಬೇಕೋ ಅದನ್ನು ನಮ್ಮ ರಾಜ್ಯದ ಮಂತ್ರಿಗಳು ಮಾಡುತ್ತಿದ್ದಾರೆ.

Advertisement

ಇದನ್ನು ನಾವು ಖಂಡಿಸುತ್ತೇವೆ. ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಯಲ್ಲಿ ನನ್ನದು ಸಹಿತ ಹಲವು ನಾಯಕರ ಹೆಸರು ಕೇಳಿ ಬರುತ್ತಿದೆ. ಈ ಬಗ್ಗೆ ವರಿಷ್ಠರ ನಿರ್ಧಾರಕ್ಕೆ ಬದ್ಧ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next