Advertisement

ಈ ಬಾರಿ ಜಿಲ್ಲಾ ಕೆಂದ್ರಗಳಲ್ಲಿ ಡಿ.ಸಿ.ಗಳಿಂದಲೇ ಧ್ವಜಾರೋಹಣ

10:02 AM Aug 14, 2019 | Team Udayavani |

ಬೆಂಗಳೂರು: ಈ ಬಾರಿ ಜಲಪ್ರವಾಹದಿಂದಾಗಿ ಉತ್ತರ ಕರ್ನಾಟಕ ಸಹಿತ ರಾಜ್ಯದ ಹಲವಾರು ಭಾಗಗಳು ಭಾರೀ ಮಳೆ ಮತ್ತು ಪ್ರವಾಹ ಸಂಬಂಧಿತ ಹಾನಿಗಳಿಂದ ತತ್ತರಿಸಿರುವುದರಿಂದ ಈ ಬಾರಿ ರಾಜ್ಯದೆಲ್ಲೆಡೆ ಸರಳ ರೀತಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುವಂತೆ ರಾಜ್ಯ ಸರಕಾರ ಜಿಲ್ಲಾಡಳಿತಗಳಿಗೆ ಸೂಚನೆ ನೀಡಿದೆ. ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಯವರು ರಾಜ್ಯ ಸರಕಾರದ ಪರವಾಗಿ ಈ ಕುರಿತಾಗಿ ಆದೇಶ ಹೊರಡಿಸಿದ್ದಾರೆ.

Advertisement

ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಭಾರತೀಯ ಜನತಾ ಪಕ್ಷ ಸರಕಾರದ ಪೂರ್ಣ ಪ್ರಮಾಣದ ಸಚಿವ ಸಂಪುಟ ವಿಸ್ತರಣೆ ಆಗದಿರುವ ಹಿನ್ನಲೆಯಲ್ಲಿ ಹಾಗೂ ಉಸ್ತುವಾರಿ ಸಚಿವರ ನೇಮಕ ಇನ್ನೂ ಆಗದಿರುವ ಕಾರಣದಿಂದ ಈ ಬಾರಿ ಬೆಂಗಳೂರು ನಗರ ಜಿಲ್ಲೆಯನ್ನು ಹೊರತುಪಡಿಸಿ ರಾಜ್ಯದ ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಆಯಾ ಜಿಲ್ಲಾಧಿಕಾರಿಗಳು, ಉಪ ವಿಭಾಗಗಳಲ್ಲಿ ಉಪವಿಭಾಗಾಧಿಕಾರಿಗಳು ಮತ್ತು ತಾಲ್ಲೂಕುಗಳಲ್ಲಿ ತಹಶೀಲ್ದಾರರು ಆಗಸ್ಟ್ 15ರಂದು ಧ್ವಜಾರೋಹಣವನ್ನು ನಡೆಸುವಂತೆ ಈ ಆದೇಶದಲ್ಲಿ ಸೂಚಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next