Advertisement

ರಾಜ್ಯ ಸರ್ಕಾರ ಸುಭದ್ರ: ಸಚಿವ ಪುಟ್ಟರಾಜು

01:05 AM Jan 03, 2019 | Team Udayavani |

ಮೈಸೂರು: ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರ ರಚನೆಯಾದ ದಿನದಿಂದಲೂ ಬಿಜೆಪಿಯವರು ವಿರೋಧ ಪಕ್ಷಗಳ ಶಾಸಕರಿಗೆ ಆಮಿಷ ಒಡ್ಡುತ್ತಾ ಆಪರೇಷನ್‌ ಕಮಲಕ್ಕೆ ಯತ್ನಿಸುತ್ತಿದ್ದು, ಇದರಲ್ಲಿ ಅವರು ಸಫ‌ಲರಾಗುವುದಿಲ್ಲ. ಸರ್ಕಾರ ಸುಭದ್ರವಾಗಿದೆ ಎಂದು ಸಣ್ಣ ನೀರಾವರಿ ಸಚಿವ ಸಿ.ಎಸ್‌.ಪುಟ್ಟರಾಜು ತಿಳಿಸಿದರು. 

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಸರ್ಕಾರ, ರಾಜ್ಯದ ಜನಸಾಮಾನ್ಯರ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಮತ್ತು ಮಂತ್ರಿಗಳು ತಂಡವಾಗಿ ಕೆಲಸ ಮಾಡುತ್ತಿದ್ದೇವೆ. ಸಂಪುಟ ಪುನಾರಚನೆ ಬಗ್ಗೆ ಯಾರಿಗೂ ಅಸಮಾಧಾನವಿಲ್ಲ. ಜತೆಗೆ ರಾಜಕೀಯವಾಗಿಯೂ ಯಾವುದೇ ಗೊಂದಲಗಳಿಲ್ಲ. ಆದರೆ, ಎಲ್ಲ ಗೊಂದಲಗಳನ್ನು ಮಾಧ್ಯಮಗಳೇ ಹುಟ್ಟುಹಾಕುತ್ತಿವೆ. ಇದನ್ನು ಬಿಟ್ಟು ಸರ್ಕಾರದ ಜನಪರ ಕೆಲಸಗಳಿಗೆ ಬೆನ್ನುತಟ್ಟುವ ಕೆಲಸವಾಗಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next