Advertisement

ಚುನಾವಣಾ ಆಯೋಗದ ಅಧಿಕಾರ ಕಸಿದುಕೊಂಡ ರಾಜ್ಯ ಸರ್ಕಾರ: ಡಿಕೆ ಶಿವಕುಮಾರ್

11:30 AM May 18, 2022 | Team Udayavani |

ಬೆಂಗಳೂರು: ರಾಜ್ಯದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯಿತಿ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದರೂ ಸಹ, ಚುನಾವಣಾ ಆಯೋಗ ಹೈಕೋರ್ಟ್‌ನಲ್ಲಿ ಮೆಮೋ ಸಲ್ಲಿಸಿ, ರಾಜ್ಯ ಸರ್ಕಾರ ಅಧಿಕಾರ ಕಸಿದುಕೊಂಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ‌.ಕೆ ಶಿವಕುಮಾರ್ ರಾಜ್ಯ ಸರ್ಕಾರದ ನಡೆಯನ್ನು ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ.

Advertisement

ಸಂವಿಧಾನದ ಅಡಿಯಲ್ಲಿ ಚುನಾವಣಾ ಆಯೋಗಕ್ಕೆ ಸ್ವಾಯತ್ತತೆ, ಸ್ವಾತಂತ್ರ್ಯ ನೀಡಲಾಗಿದೆ.  ಆದರೆ ಸರ್ಕಾರ ತನ್ನ ಅಧಿಕಾರವನ್ನು ಕಸಿದುಕೊಂಡಿದೆ ಎಂದು ಚುನಾವಣಾ ಆಯೋಗವೇ ಹೇಳುತ್ತಿರುವಾಗ, ದೇಶದಲ್ಲಿ ಪ್ರಜಾಪ್ರಭುತ್ವ ಇನ್ನೂ ಜೀವಂತವಾಗಿದೇ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ:ಬೊಮ್ಮಾಯಿ ನಿವಾಸದಲ್ಲಿ ಬಿಜೆಪಿಗೆ ಸೇರ್ಪಡೆಯಾದ ಬಸವರಾಜ ಹೊರಟ್ಟಿ

ಸುಪ್ರೀಂ ಕೋರ್ಟ್ ಆದೇಶವಿದ್ದರೂ ಸಹ ಚುನಾವಣಾ ಆಯೋಗವು ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತ್ ಚುನಾವಣೆ ನಡೆಸಲು ಸಾಧ್ಯವಾಗದಂತೆ ರಾಜ್ಯ ಸರ್ಕಾರವು ಅಧಿಕಾರ ಕಸಿದುಕೊಂಡ ಬಗ್ಗೆ ನ್ಯಾಯಾಲಯಗಳು ಸಮಸ್ಯೆ ಬಗೆಹರಿಸಬಹುದೆಂಬ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next