Advertisement

ರಾಜ್ಯ ಸರ್ಕಾರದ ಮಾತೃಶ್ರೀ ಯೋಜನೆ ಸ್ಥಗಿತ

04:22 AM May 16, 2020 | Lakshmi GovindaRaj |

ಬೆಂಗಳೂರು: ಕೇಂದ್ರ ಸರ್ಕಾರದ ಮಾತೃ ವಂದನ ಯೋಜನೆ ಜಾರಿಗೊಳಿಸಿರುವುದರಿಂದ ರಾಜ್ಯ ಸರ್ಕಾರ ಗರ್ಭಿಣಿ ಮಹಿಳೆಯರಿಗೆ ಆಹಾರ ಪದಾರ್ಥ ನೀಡುತ್ತಿದ್ದ ಮಾತೃಶ್ರೀ ಯೋಜನೆಯನ್ನು ಸ್ಥಗಿತಗೊಳಿಸಲು ತೀರ್ಮಾನಿಸಿದೆ.‌ ಕೇಂದ್ರ  ಸರ್ಕಾರ ಮಾತೃ ವಂದನಾ ಯೋಜನೆ ಅಡಿಯಲ್ಲಿ ಗರ್ಭಿಣಿ ಹಾಗೂ ಬಾಣಂತಿಯರಿಗೆ 5000 ರೂ ಪ್ರೋತ್ಸಾಹ ಧನ ನೀಡುತ್ತಿರುವುದರಿಂದ ಅಲ್ಲದೆ, ಕೇಂದ್ರ ಸರ್ಕಾರ ಪುರಸ್ಕೃತ ಮಾತೃಪೂರ್ಣ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಪೌಷ್ಟಿಕ ಆಹಾರ ನೀಡುತ್ತಿರುವುದರಿಂದ ಮಾತೃಶ್ರೀ ಯೋಜನೆಯನ್ನು ಸ್ಥಗಿತಗೊಳಿಸಲು ತೀರ್ಮಾನಿಸಿರುವುದಾಗಿ ಆರ್ಥಿಕ ಇಲಾಖೆ ಟಿಪ್ಪಣಿ ಮಾಡಿದೆ.

Advertisement

ಇನ್ನು ದೌರ್ಜನ್ಯಕ್ಕೆ ಒಳಗಾಗುವ ಮಹಿಳೆಯರ ರಕ್ಷಣೆಗೆ ಜಾರಿಯಲ್ಲಿದ್ದ ಸಾಂತ್ವನ  ಯೋಜನೆಯನ್ನೂ ರದ್ದುಗೊಳಿಸಲು ಸರ್ಕಾರ ನಿರ್ಧರಿಸಿದೆ. ಅದೇ ಮಾದರಿಯಲ್ಲಿ ಕೇಂದ್ರ ಸರ್ಕಾರ ಒನ್‌ ಸ್ಟಾಪ್‌ ಕೇಂದ್ರ ತೆರೆಯಲು ತೀರ್ಮಾನಿಸಿರುವುದರಿಂದ ಸಾಂತ್ವನ ಯೋಜನೆ ರದ್ದುಗೊಳಿಸುವುದಾಗಿ ತಿಳಿಸಲಾಗಿದೆ.  ಲ್ಲದೆ,ಭಾಗ್ಯಲಕ್ಷಿ  ಯೋಜನೆಯನ್ನು ಎಲ್‌ಐಸಿಯಿಂದ ಬದಲಾಯಿಸಿ ಅಂಚೆ ಇಲಾಖೆ ವ್ಯಾಪ್ತಿಗೆ ನೀಡಲು ಸರ್ಕಾರ ತೀರ್ಮಾನಿಸಿದೆ. ಹಾಗೂ ಏಡ್ಸ್ ಪೀಡಿತ ಮಕ್ಕಳಿಗೆ ನೀಡುವ ಪ್ರೋತ್ಸಾಹ ಧನವನ್ನು ಅವರ ಅಕೌಂಟ್‌ಗೆ ಹಾಕಲು  ನಿರ್ಧರಿಸಲಾಗಿದೆ. ಹಾಗೂ ನಗರ ಪ್ರದೇಶದಲ್ಲಿ 450 ಅಂಗನವಾಡಿ ಕೇಂದ್ರಗಳನ್ನು.ಮೇಲ್ದರ್ಜೆಗೈರಿಸಲು ಸರ್ಕಾರ ತೀರ್ಮಾನಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next