Advertisement

ವೈದ್ಯರಿಗೆ ಅಗತ್ಯ ಭದ್ರತೆ ಒದಗಿಸಲು ಬದ್ಧ,ಕಾನೂನು ಮಾರ್ಪಾಡಿಗೂ ಸಿದ್ಧ; ಸಿಎಂ

11:59 AM Jun 21, 2019 | Nagendra Trasi |

ಬೆಂಗಳೂರು: ರಾಜ್ಯದಲ್ಲಿರುವ ವೈದ್ಯರುಗಳಿಗೆ ಅಗತ್ಯ ಭದ್ರತೆ ಒದಗಿಸಲು ಸರ್ಕಾರ ಬದ್ಧವಾಗಿದ್ದು, ಈ ಸಂಬಂಧ ಅಗತ್ಯಬಿದ್ದರೆ ಕಾನೂನಿನಲ್ಲಿ ಮಾರ್ಪಾಡು ಮಾಡಲಿಕ್ಕೂ ಸಿದ್ಧ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.

Advertisement

ನಗರದ ಕಿದ್ವಾಯಿ ಸ್ಮಾರಕ ಗಂಥಿ ಆಸ್ಪತ್ರೆಯಲ್ಲಿ ಇನ್ಫೋಸಿಸ್ ಪ್ರತಿಷ್ಠಾನ ನಿರ್ಮಿಸಿದ ಐದು ಸುಸಜ್ಜಿತ ಶಸ್ತ್ರಚಿಕಿತ್ಸಾ ಕೊಠಡಿಗಳನ್ನು ಗುರುವಾರ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.

ವೈದ್ಯರ ರಕ್ಷಣೆಗೆ ಈಗಾಗಲೇ ರಾಜ್ಯದಲ್ಲಿ ಕಾನೂನು ಇದೆ. ಅದರಂತೆ ವ್ಯದ್ಯರ ಮೇಲೆ ಹಲ್ಲೆ ಮಾಡಿದವರಿಗೆ ಜಾಮೀನುರಹಿತ ಮೂರು ವರ್ಷ ಕಾರಾಗೃಹ ಶಿಕ್ಷೆ ವಿಧಿಸಲಾಗುತ್ತದೆ. ಇದನ್ನು ಇನ್ನಷ್ಟು ಬಲಿಷ್ಠಗೊಳಿಸಲು ಸರ್ಕಾರ ಸಿದ್ಧ. ಅಗತ್ಯಬಿದ್ದರೆ ಮಾರ್ಪಾಡು ಕೂಡ ಮಾಡಲಾಗುವುದು ಎಂದರು.

ಅಲ್ಲದೆ, ಈ ಕಾನೂನಿಗೆ ಸಂಬಂಧಿಸಿದ ಸುತ್ತೋಲೆಯನ್ನು ಕೂಡ ಎಲ್ಲ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕಳುಹಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಇದೇ ವೇಳೆ ಐದು ಶಸ್ತ್ರಚಿಕಿತ್ಸಾ ಕೊಠಡಿಗಳನ್ನು ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ ಸುಧಾ ಮೂರ್ತಿ ಪತ್ರವನ್ನು ಹಸ್ತಾಂತರಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next