Advertisement

ರಾಜ್ಯ ಹೈಕೋರ್ಟ್‌ಗೆ ನ್ಯಾ|ಅವಸ್ಥಿ ಸಿಜೆ

12:11 AM Oct 10, 2021 | Team Udayavani |

ಹೊಸದಿಲ್ಲಿ: ಕರ್ನಾಟಕ ಸೇರಿದಂತೆ ದೇಶದ 8 ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳನ್ನು ನೇಮಕ ಮಾಡಿ ಕೇಂದ್ರ ಸರಕಾರ ಅಧಿಸೂಚನೆ ಹೊರಡಿಸಿದೆ. ರಾಜ್ಯ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ರಿತು ರಾಜು ಅವಸ್ಥಿ ಅವರನ್ನು ನೇಮಕ ಮಾಡಿದೆ. ಸದ್ಯ ಇಲ್ಲಿ ಹಂಗಾಮಿ ಸಿಜೆ ಆಗಿ ಕಾರ್ಯ ನಿರ್ವಹಿಸುತ್ತಿರುವ ನ್ಯಾ| ಸತೀಶ್‌ಚಂದ್ರ ಶರ್ಮ ಅವರನ್ನು ತೆಲಂಗಾಣ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.

Advertisement

ಕನ್ನಡಿಗರಾದ ನ್ಯಾ| ಅರವಿಂದ ಕುಮಾರ್‌ ಅವರನ್ನು ಗುಜರಾತ್‌ ಹೈಕೋರ್ಟ್‌ ಸಿಜೆ ಆಗಿ ಮತ್ತು ಆರ್‌.ವಿ. ಮಳೀಮಠ ಅವರನ್ನು ಮಧ್ಯಪ್ರದೇಶ ಹೈಕೋರ್ಟ್‌ ಸಿಜೆ ಆಗಿ ನೇಮಿಸಲಾಗಿದೆ.

ಅಲಹಾಬಾದ್‌, ಕಲ್ಕತ್ತಾ, ಆಂಧ್ರ, ಮೇಘಾಲಯ ಹೈಕೋರ್ಟ್‌ಗಳಿಗೂ ನೂತನ ಮುಖ್ಯ ನ್ಯಾಯಮೂರ್ತಿಗಳನ್ನು ನೇಮಕ ಮಾಡಿ ಸರಕಾರ ಆದೇಶಿಸಿದೆ.

ಇದನ್ನೂ ಓದಿ:ಲಖೀಂಪುರ ಹಿಂಸೆ: ಆಶಿಷ್‌ ಮಿಶ್ರಾ ಬಂಧನ; ಸತತ 8 ಗಂಟೆ ಎಸ್‌ಐಟಿ ವಿಚಾರಣೆ

Advertisement

Udayavani is now on Telegram. Click here to join our channel and stay updated with the latest news.

Next