Advertisement

9ಕ್ಕೆ ರಾಜ್ಯ, ರಾಷ್ಟ್ರೀಯ ಹೆದ್ದಾರಿಗಳು ಬಂದ್‌

08:20 AM Aug 02, 2017 | Team Udayavani |

ಬೆಂಗಳೂರು: ಸ್ವಾಮಿನಾಥನ್‌ ವರದಿ ಜಾರಿ, ಬರಪೀಡಿತ ಪ್ರದೇಶದ ರೈತರಿಗೆ ಕುಟುಂಬ ನಿರ್ವಹಣೆಗಾಗಿ ಬಡ್ಡಿ ರಹಿತ ಸಾಲ ನೀಡುವುದೂ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆ.9ರಂದು ರಾಜ್ಯ ಮತ್ತು ರಾಷ್ಟ್ರೀಯ
ಹೆದ್ದಾರಿಗಳನ್ನು ಬಂದ್‌ ಮಾಡುವುದಾಗಿ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್‌ ತಿಳಿಸಿದ್ದಾರೆ. ಮಂಗಳವಾರ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ವತಿಯಿಂದ ನಗರದ ಗಾಂಧಿ ಭವನದಲ್ಲಿ ರಾಜ್ಯದ ಬರ ನಿರ್ವಹಣೆ ಹಾಗೂ ರೈತರ ಗಂಭೀರ ಸಮಸ್ಯೆಗಳ ಕುರಿತು ಆಯೋಜಿಸಿದ್ದ ರಾಜ್ಯಮಟ್ಟದ ಮುಖಂಡರ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ರಾಷ್ಟ್ರೀಯ ಕಿಸಾನ್‌ ಮಹಾಸಂಘದ ನೇತೃತ್ವದಲ್ಲಿ
ರಾಷ್ಟ್ರಾದ್ಯಂತ ಹೋರಾಟಕ್ಕೆ ಸಿದಟಛಿತೆ ನಡೆಸಲಾಗುತ್ತಿದೆ.

Advertisement

ರಾಜ್ಯ ರೈತ ಸಂಘಟನೆಗಳು ಸೇರಿದಂತೆ ಸಾರ್ವಜನಿಕ ಸಂಘಟನೆಗಳು ಈ ಹೋರಾಟಕ್ಕೆ ಕೈಜೋಡಿಸಲಿವೆ ಎಂದು ಹೇಳಿದರು. ಇತ್ತೀಚೆಗೆ ಹರ್ಯಾಣದಲ್ಲಿ ದೇಶದ ಪ್ರಮುಖ 153 ರೈತ ಸಂಘಟನೆಗಳ ಸಭೆ ನಡೆಯಿತು.
ಈ ಸಭೆಯಲ್ಲಿ ರೈತರ ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಿ ಆ.9ರಂದು ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳನ್ನು ಬಂದ್‌ ನಡೆಸಲು ಸೂಚಿಸಲಾಗಿದೆ. ಆ ಪ್ರಕಾರ ರಾಜ್ಯದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಗಳನ್ನು ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಬಂದ್‌ಮಾಡಲಾಗುವುದು ಎಂದು ಅವರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next