Advertisement

Bangalore: ನಾಳೆ ಪರಿಸರ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶ

10:28 PM Apr 04, 2024 | Team Udayavani |

ಬೆಂಗಳೂರು: ಪರಿಸರ ರಕ್ಷಣ ಕಾರ್ಯಾಸೂಚಿಯನ್ನು ರಾಜಕೀಯ ಪಕ್ಷಗಳು ತಮ್ಮ ಚುನಾವಣ ಪ್ರಣಾಳಿಕೆಯಲ್ಲಿ ಸೇರಿಸುವಂತೆ ಆಗ್ರಹಿಸಿ ಎ.6ರಂದು ಫ್ರೀಡಂ ಪಾರ್ಕ್‌ನಲ್ಲಿ  ಪರಿಸರ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಪರಿಸರ ಕಾರ್ಯಕರ್ತ ಆಂಜನೇಯ ರೆಡ್ಡಿ ತಿಳಿಸಿದರು.

Advertisement

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಶೀಘ್ರದಲ್ಲಿ ನಡೆಯಲಿದೆ. ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು, ಆಕರ್ಷಕ ಭರವಸೆಗಳನ್ನು ಹೊಂದಿರುವ ಪ್ರಣಾಳಿಕೆಗಳನ್ನು ನೀಡಲು ಸಿದ್ಧರಾಗಿದ್ದಾರೆ. ಪ್ರಸ್ತುತ ಪರಿಸರ ಬಿಕ್ಕಟ್ಟಿನ ಸಂದಿಗ್ಧ ಕಾಲ ಎದುರಾಗಿದೆ. ತಾಪಮಾನ ಧಾರಣ ಸೂಚ್ಯಂಕ ಮಿತಿ 1.5 ಡಿಗ್ರಿ ಸೆಲ್ಸಿಯಸ್‌ ದಾಟಿರುವುದು ಹವಾಮಾನ ತುರ್ತು ಪರಿಸ್ಥಿತಿ ಬಿಕ್ಕಟ್ಟು ಎದುರಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಈ ನಿಟ್ಟಿನಲ್ಲಿ ಚುನಾವಣ ಪ್ರಣಾಳಿಕೆಯಲ್ಲಿ ಪರಿಸರ ಸಂರಕ್ಷಣೆ ಕಾರ್ಯಾಸೂಚಿಯನ್ನು ಎಲ್ಲ ರಾಜಕೀಯ ಪಕ್ಷಗಳು ಆಳವಡಿಸಿಕೊಳ್ಳುವಂತೆ ಆಗ್ರಹಿಸಲು ರಾಜ್ಯಮಟ್ಟದ ಪರಿಸರಾಸಕ್ತ ಜನರೇ ರೂಪಿಸಿದ  “ಪರಿಸರಕ್ಕಾಗಿ ನಾವು’ ಸಂಘಟನೆಯಿಂದ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ವೇಳೆ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ತಮ್ಮ ಚುನಾವಣೆ ಪ್ರಣಾಳಿಕೆಯಲ್ಲಿ ಪರಿಸರ ಸಂರಕ್ಷಣೆಗೆ ಸಂಬಂಧಿಸಿದ ಭರವಸೆ ನೀಡಬೇಕೆಂದು ಆಗ್ರಹಿಸಲಾಗುತ್ತದೆ ಎಂದರು. ಸಂಘದ ಪ್ರಮುಖರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next