Advertisement

ರಾಜ್ಯದ ಸೇಡಿನ ರಾಜಕಾರಣ: ನಳಿನ್‌

01:23 AM May 07, 2019 | Team Udayavani |

ಮಂಗಳೂರು: ತನ್ನ ಸ್ಥಾನ ಉಳಿಸಿಕೊಳ್ಳಲು ಹರಸಾಹಸ ಪಡುತ್ತಿರುವ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಸರಕಾರದ ಕಾರ್ಯವೈಖರಿಗಳನ್ನು ಟೀಕಿಸುವ ಪತ್ರಕರ್ತರನ್ನು, ರಾಷ್ಟ್ರೀಯವಾದಿ ಸಾಮಾಜಿಕ ಜಾಲತಾಣ ಬಳಕೆ ದಾರರ ಮೇಲೆ ಸುಳ್ಳು ಕೇಸುಗಳನ್ನು ದಾಖಲಿಸುವ ಮೂಲಕ ಜೈಲಿಗೆ ಹಾಕುವ ಮೂಲಕ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ಹೇಳಿದರು.

Advertisement

ಜಿಲ್ಲಾ ಬಿಜೆಪಿ ವತಿಯಿಂದ ಸೋಮವಾರ ಜಿಲ್ಲಾಧಿ ಕಾರಿ ಕಚೇರಿ ಎದುರು ರಾಷ್ಟ್ರೀಯ ವಿಚಾರಧಾರೆಯುಳ್ಳ ಪತ್ರಕರ್ತರನ್ನು ಬಂಧಿಸುತ್ತಿರುವ ರಾಜ್ಯ ಸರಕಾರದ ವಿರುದ್ಧ ನಡೆದ ಪ್ರತಿಭಟನ ಸಭೆಯಲ್ಲಿ ಅವರು ಮಾತನಾಡಿದರು.

ಮತ್ತೆ ಕೇಂದ್ರದಲ್ಲಿ ಬಿಜೆಪಿ ಸ‌ರಕಾರ ಅಧಿಕಾರಕ್ಕೆ ಬರಲಿದೆ. ಅದೇ ದಿನ ರಾಜ್ಯ ಸರಕಾರ ಪತನಗೊಳ್ಳಲಿದೆ. ಮುಖ್ಯಮಂತ್ರಿ, ಗೃಹ ಸಚಿವರು ಜೈಲಿಗಟ್ಟಿದ ಪತ್ರಕರ್ತರು ಅಂದು ಹೊರಗೆ ಬರಲಿದ್ದಾರೆ. ಗೃಹಸಚಿವ ಎಂ.ಬಿ. ಪಾಟೀಲ್‌ ಜೈಲು ಸೇರಲಿದ್ದಾರೆ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next