Advertisement

Theerthahalli: ಕಿಮ್ಮನೆ ರತ್ನಾಕರ್‌ಗೆ ನಿಗಮ ಮಂಡಳಿಯಲ್ಲಿ ಸ್ಥಾನ !?

03:29 PM Oct 30, 2023 | Team Udayavani |

ತೀರ್ಥಹಳ್ಳಿ: ಮಾಜಿ ಶಾಸಕ, ರಾಜ್ಯದ ಮಾಜಿ ಸಚಿವರೂ ಆದಂತಹ ಕಿಮ್ಮನೆ ರತ್ನಾಕರ್‌ ಅವರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಲು ಮುಖ್ಯಮಂತ್ರಿ ಹಾಗೂ ಉಪ ಮುಖ್ಯ ಮಂತ್ರಿ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

Advertisement

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಹುಮತವನ್ನು ಹೊಂದಿ ಅಧಿಕಾರಕ್ಕೆ ಬಂದಿದ್ದರೂ ತೀರ್ಥಹಳ್ಳಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲಾಗಿದೆ. ಎರಡು ಬಾರಿ ಶಾಸಕರಾಗಿ, ಶಿಕ್ಷಣ ಸಚಿವರಾಗಿಯೂ ಕಾರ್ಯ ನಿರ್ವಹಿಸಿರುವ ಕಿಮ್ಮನೆ ಪಕ್ಷದಲ್ಲಿ ತಮ್ಮದೇ ಆದ ವರ್ಚಸ್ಸನ್ನು ಹೊಂದಿದ್ದು, ಪ್ರಾಮಾಣಿಕ ರಾಜಕಾರಣಿ ಎಂದೇ ಗುರುತಿಸಿಕೊಂಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿಯೂ ಗುರುತಿಸಿಕೊಂಡಿರುವ ಕಿಮ್ಮನೆ ಈ ಬಾರಿ ಗೆಲುವು ಸಾಧಿಸಿದ್ದೇ ಆಗಿದ್ದರೆ ಸಂಪುಟದಲ್ಲಿ ಸಚಿವರಾಗುವ ಸಾಧ್ಯತೆಯಿತ್ತು. ಕ್ಷೇತ್ರದಲ್ಲಿದ್ದ ಎಲ್ಲಾ ಭಿನ್ನಮತಗಳನ್ನೂ ಬಗೆಹರಿಸುವ ನಿಟ್ಟಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಾದರೂ ಕಿಮ್ಮನೆ ಸೋಲನ್ನು ಅನುಭವಿಸಬೇಕಾಯಿತು.

ಇದೀಗ ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆ ಪಕ್ಷ ಸಂಘಟನೆಯ ದೃಷ್ಟಿಯಿಂದ ರಾಜ್ಯದ ಹಲವು ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನವನ್ನು ನೀಡಲು ಮುಂದಾಗಿರುವ ಕಾಂಗ್ರೆಸ್ 25 ಹಾಲಿ ಶಾಸಕರೊಂದಿಗೆ ಐದು ಮಂದಿ ಮಾಜಿ ಶಾಸಕರ ಹೆಸರನ್ನೂ ಈಗಾಗಲೇ ಅಂತಿಮಗೊಳಿಸಿದ್ದು ಅದರಲ್ಲಿ ಕಿಮ್ಮನೆ ರತ್ನಾಕರ್ ಅವರ ಹೆಸರೂ ಸೇರಿದೆ ಎಂಬ ಮಾತುಗಳು ಉನ್ನತ ಮೂಲಗಳಿಂದ ಕೇಳಿ ಬರುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next