Advertisement

ರಾಜ್ಯದಲ್ಲಿಂದು 1478 ಜನರಿಗೆ ಸೋಂಕು ದೃಢ: 15 ಸಾವಿರ ಹತ್ತಿರ ತಲುಪಿದ ಸೋಂಕಿತರ ಸಂಖ್ಯೆ

06:39 PM Jul 07, 2020 | keerthan |

ಬೆಂಗಳೂರು: ರಾಜ್ಯದಲ್ಲಿ ಇಂದು ಕೋವಿಡ್-19 ಸೋಂಕು 1478 ಜನರ ದೇಹ ಪ್ರವೇಶಿಸಿದೆ. ಇದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 14,385ಕ್ಕೆ ಏರಿಕೆಯಾಗಿದೆ.

Advertisement

ಅಷ್ಟೇ ಅಲ್ಲದೆ ಇಂದು 15 ಮಂದಿ ಸೋಂಕಿತರು ಮರಣ ಹೊಂದಿದ್ದಾರೆ. ಬೀದರ್ ನಲ್ಲಿ ಐವರು ಸೋಂಕಿತರು ಮರಣ ಹೊಂದಿದ್ದರೆ, ಬಾಗಲಕೋಟೆ, ದಕ್ಷಿಣ ಕನ್ನಡ, ಮಂಡ್ಯ ಜಿಲ್ಲೆಗಳಲ್ಲಿ ತಲಾ ಓರ್ವ ಸೋಂಕಿತ ಸಾವನ್ನಪ್ಪಿದ್ದಾರೆ. ಇದುವರೆಗೆ ರಾಜ್ಯದಲ್ಲಿ 416 ಮಂದಿ ಕೋವಿಡ್ ಸೋಂಕಿತರು ಅಸುನೀಗಿದ್ದಾರೆ.

ಇಂದು ಬೆಂಗಳೂರಿನಲ್ಲಿ ಅತೀ ಹೆಚ್ಚು 800 ಮಂದಿಗೆ ಸೋಂಕು ದೃಢವಾಗಿದ್ದರೆ, ಬೀದರ್ ನಲ್ಲಿ 51 ಮಂದಿಗೆ, ಚಾಮರಾಜ ನಗರದಲ್ಲಿ ಆರು ಮಂದಿಗೆ ಕೋವಿಡ್ ಸೋಂಕು ದೃಢವಾಗಿದೆ.

ರಾಜ್ಯದ ಆರೋಗ್ಯ ಇಲಾಖೆ ಬುಲೆಟಿನ್ ಇನ್ನಷ್ಟೇ ಬಿಡುಗಡೆಯಾಗಬೇಕಿದ್ದು, ಹೆಚ್ಚಿನ ಮಾಹಿತಿ ತಿಳಿಯಬೇಕಿದೆ.

Advertisement

Udayavani is now on Telegram. Click here to join our channel and stay updated with the latest news.

Next