Advertisement

ಸೋಲಿನ ಸತ್ಯ ಶೋಧನೆಗೆ 25ರಿಂದ ರಾಜ್ಯ ಪ್ರವಾಸ

06:41 AM Jun 11, 2019 | Team Udayavani |

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಸೋಲಿಗೆ ಕಾರಣ ಹುಡುಕಲು ಕೆಪಿಸಿಸಿ ನೇಮಿಸಿರುವ ಸತ್ಯ ಶೋಧನಾ ಸಮಿತಿ ಜೂನ್‌ 25 ರಿಂದ ರಾಜ್ಯ ಪ್ರವಾಸ ಕೈಗೊಳ್ಳಲು ನಿರ್ಧರಿಸಿದೆ.

Advertisement

ಕೆಪಿಸಿಸಿ ಉಪಾಧ್ಯಕ್ಷ ವಿ.ಆರ್‌. ಸುದರ್ಶನ್‌ ಅಧ್ಯಕ್ಷತೆಯ ಸಮಿತಿ ಸೋಮವಾರ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಜೊತೆ ಮೊದಲ ಸಭೆ ನಡೆಸಿದ್ದು, ಸೋಲಿಗೆ ಸೂಕ್ತ ಕಾರಣಗಳನ್ನು ಪತ್ತೆ ಹಚ್ಚಲು ಪ್ರತಿ ಲೋಕಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ, ಮುಖಂಡರು ಹಾಗೂ ಕಾರ್ಯಕರ್ತರ ಅಭಿಪ್ರಾಯ ಪಡೆದು ವರದಿ ನೀಡಲು ತೀರ್ಮಾನಿಸಿದೆ.

ಸತ್ಯ ಶೋಧನೆಯ ಮೊದಲ ಪ್ರವಾಸವನ್ನು ಜೂ.25 ರಿಂದ ಮೂರು ದಿನ ಹೈದರಾಬಾದ್‌ ಕರ್ನಾಟಕದ ಬೀದರ್‌, ಕಲಬುರಗಿ ಹಾಗೂ ರಾಯಚೂರು ಜಿಲ್ಲೆಗಳಿಗೆ ಭೇಟಿ ನೀಡಲು ನಿರ್ಧರಿಸಿದ್ದಾರೆ. ಆ ನಂತರ ಪ್ರತಿ ಮಂಗಳವಾರ, ಬುಧವಾರ ಮತ್ತು ಗುರುವಾರ ಪ್ರತಿ ದಿನ ಒಂದೊಂದು ಲೋಕಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ, ಕಾರ್ಯಕರ್ತರು, ಜಿಲ್ಲಾ ಮುಖಂಡರು ಹಾಗೂ ಸಾರ್ವಜನಿಕರ ಅಭಿಪ್ರಾಯವನ್ನೂ ಪಡೆಯಲು ಸಮಿತಿ ಸದಸ್ಯರು ನಿರ್ಧರಿಸಿದ್ದಾರೆ.

ಸಭೆಯಲ್ಲಿ ಸಮಿತಿ ಅಧ್ಯಕ್ಷ ವಿ.ಆರ್‌. ಸುದರ್ಶನ್‌, ಮಾಜಿ ಸಚಿವರಾದ ವೀರ್‌ಕುಮಾರ್‌ ಪಾಟೀಲ್‌, ನಜೀರ್‌ ಅಹಮದ್‌, ಮಾಜಿ ಸಂಸದ ಧ್ರುವನಾರಾಯಣ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next