Advertisement

Karkala ಇನ್ನೆರಡು ದಿನಗಳಲ್ಲಿ ರಾಜ್ಯ ಪ್ರವಾಸ: ಸುನಿಲ್‌ ಕುಮಾರ್‌

11:04 PM Dec 24, 2023 | Team Udayavani |

ಕಾರ್ಕಳ:ಬಿಜೆಪಿ ಪಕ್ಷ ಹಾಗೂ ಹಿರಿಯ ನಾಯಕರು ರಾಜ್ಯದಲ್ಲಿ ಪಕ್ಷ ಸಂಘಟನೆಗಾಗಿ ದೊಡ್ಡ ಜವಾಬ್ದಾರಿಯನ್ನು ನೀಡಿದ್ದಾರೆ.

Advertisement

ಶಾಸನ ಸಭೆ, ಕ್ಷೇತ್ರದ ಹಿತರಕ್ಷಣೆ, ಪಕ್ಷ ಸಂಘಟನೆ ವಿಚಾರಕ್ಕೆ ಒತ್ತು ನೀಡಿ ರಾಜ್ಯದಲ್ಲಿ ಪಕ್ಷವನ್ನು ಒಗ್ಗಟ್ಟಿನಿಂದ ಕಟ್ಟುತ್ತೇವೆ. ಇದಕ್ಕಾಗಿ ಶೀಘ್ರವೇ ರಾಜ್ಯ ಪ್ರವಾಸ ಕೈಗೊಳ್ಳುವೆ ಎಂದು ರಾಜ್ಯ ಬಿಜೆಪಿಯ ನೂತನ ಪ್ರಧಾನ ಕಾರ್ಯದರ್ಶಿ, ಶಾಸಕ ವಿ. ಸುನಿಲ್‌ ಕುಮಾರ್‌ ಹೇಳಿದರು.

ಕಾರ್ಕಳದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿ ಹಿಂದುತ್ವ, ರಾಷ್ಟ್ರೀಯತೆ, ಸಂಸ್ಕೃತಿ ವಿಚಾರಗಳನ್ನು ದೊಡ್ಡ ಪ್ರಮಾಣದಲ್ಲಿ ವಿಸ್ತರಿಸಲಿದ್ದೇವೆ. ಲೋಕಸಭಾ ಚುನಾವಣೆಯಲ್ಲಿ 28 ಸ್ಥಾನ ಗೆಲ್ಲುವುದು ನಮ್ಮ ಗುರಿ. ಈ ನಿಟ್ಟಿನಲ್ಲಿ ಪಕ್ಷ ಸಂಘಟಿಸುತ್ತೇವೆ ಎಂದರು.

ಹಿರಿಯ ನ್ಯಾಯವಾದಿ ಎಂ.ಕೆ ವಿಜಯಕುಮಾರ್‌, ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ ಮುಂತಾದವರು ಉಪಸ್ಥಿತರಿದ್ದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next